ಬ್ರೇಕಿಂಗ್ ನ್ಯೂಸ್
02-09-23 06:48 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಜೆಟ್ ಏರ್ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 1ರಂದು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಬ್ಯಾಂಕ್ನಿಂದ ಸಾಲ ಪಡೆದು, ಸಾಲದ ಹಣವನ್ನು ತನ್ನದೇ ಆದ ಇತರೆ ಕಂಪನಿಗಳಿಗೆ ವರ್ಗಾವಣೆ ಮಾಡಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.
ಕೆಲವು ಗಂಟೆಗಳ ಕಾಲ ಇ.ಡಿ ಕಚೇರಿಯಲ್ಲಿ ಗೋಯಲ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಮನಿ ಲಾಂಡರಿಂಗ್ ತಡೆ ಕಾಯಿದೆ (ಪಿಎಂಎಲ್ಎ) ಅಡಿಯಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
74 ವರ್ಷದ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯವು ಮುಂಬೈನ ವಿಶೇಷ ಪಿಎಂಎಲ್ಎ ಕೋರ್ಟ್ಗೆ ಅವರನ್ನು ಹಾಜರು ಪಡಿಸಿ ಕಸ್ಟಡಿಗೆ ಕೇಳಿತ್ತು. ಜಾರಿ ನಿರ್ದೇಶನಾಲಯದ ಬೇಡಿಕೆಯನ್ನು ಮನ್ನಿಸಿದ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿದೆ.
ಇ.ಡಿ ತನಿಖೆಯ ಪ್ರಕಾರ, ಜೆಟ್ ಏರ್ವೇಸ್ ಕೆನರಾ ಬ್ಯಾಂಕ್ನಿಂದ 539 ಕೋಟಿ ರೂ. ಸಾಲ ಪಡೆದು, ಹಣವನ್ನು ಹಿಂದಿರುಗಿಸಿಲ್ಲ. ಈ ಮೂಲಕ ಬ್ಯಾಂಕ್ಗೆ ನಷ್ಟ ಉಂಟು ಮಾಡಿದೆ.
ಈ ಸಂಬಂಧ ಕಳೆದ ನವೆಂಬರ್ನಲ್ಲಿ ಕೆನರಾ ಬ್ಯಾಂಕ್ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ವಿರುದ್ಧ ವಂಚನೆ, ಕ್ರಿಮಿನಲ್ ಸಂಚು, ನಂಬಿಕೆ ದ್ರೋಹ ಮತ್ತು ಕ್ರಿಮಿನಲ್ ದುರ್ನಡತೆ ಆರೋಪ ಹೊರಿಸಿ ಕೇಸ್ ದಾಖಲಿಸಿತ್ತು. ಈ ಸಂಬಂಧ ಮೇ ತಿಂಗಳಿನಲ್ಲಿ ಸಿಬಿಐ ವಂಚನೆ ಕೇಸ್ ದಾಖಲಿಸಿತ್ತು. ನಂತರ ಇ.ಡಿ ಮನಿ ಲಾಂಡರಿಂಗ್ ಕೇಸ್ ದಾಖಲಿಸಿಕೊಂಡಿತ್ತು.
ಜೆಟ್ ಏರ್ವೇಸ್ ವಿರುದ್ಧ ಬ್ಯಾಂಕ್ ದಾಖಲಿಸಿರುವ ಎಫ್ಐಆರ್ನಲ್ಲಿ, ಕಂಪನಿಗೆ ಕ್ರೆಡಿಟ್ ಲಿಮಿಟ್ ಅಡಿಯಲ್ಲಿ 848.86 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲಾಗಿತ್ತು. ಇದರಲ್ಲಿ 538.62 ಕೋಟಿ ರೂ. ಹಣವನ್ನು ಹಿಂದಿರುಗಿಸದೆ ಮೋಸ ಎಸಗಲಾಗಿದೆ ಎಂದು ಹೇಳಲಾಗಿದೆ. ಜುಲೈ 29, 2021ರಂದು ಸಿಬಿಐ ಇದನ್ನು ವಂಚನೆ ಎಂದು ಪರಿಗಣಿಸಿತ್ತು.
ಜೆಟ್ ಏರ್ವೇಸ್ ಲಿಮಿಟೆಡ್ (ಜೆಐಎಲ್)ನ ಫೊರೆನ್ಸಿಕ್ ಆಡಿಟ್ ಪ್ರಕಾರ ಕಂಪನಿಯು ತನ್ನ ಇತರೆ ಕಂಪನಿಗಳಿಗೆ ಅಕ್ರಮವಾಗಿ 1410.41 ಕೋಟಿ ರೂ. ಕಮಿಷನ್ ವೆಚ್ಚ ಹಾಗೂ ಇತರ ಖರ್ಚುಗಳ ರೂಪದಲ್ಲಿ ಪಾವತಿ ಮಾಡಿದೆ.
ಫೊರೆನ್ಸಿಕ್ ಆಡಿಟ್ ಪ್ರಕಾರ ಜೆಟ್ ಏರ್ವೇಸ್ ತನ್ನ ಸಹ ಕಂಪನಿ ಜೆಟ್ ಲೈಟ್ (ಇಂಡಿಯಾ) ಲಿಮಿಟೆಡ್ (ಜೆಎಲ್ಎಲ್)ಗೆ ಮುಂಗಡ ಮೊತ್ತವಾಗಿ ಹಣವನ್ನು ವರ್ಗಾವಣೆ ಮಾಡಿದೆ. ಜೆಐಎಲ್ ತನ್ನ ಅಂಗಸಂಸ್ಥೆಯಾದ ಜೆಎಲ್ಎಲ್ಗೆ ಸಾಲ, ಮುಂಗಡ ಮತ್ತು ಹೂಡಿಕೆಗಳ ರೂಪದಲ್ಲಿ ಅಕ್ರಮವಾಗಿ 1410.41 ಕೋಟಿ ರೂ.ಗಳನ್ನು ರವಾನಿಸಿದೆ ಎಂದು ಹೇಳಲಾಗಿದೆ.
The Enforcement Directorate on September 1 arrested Jet Airways (India) Limited’s founder chairman Naresh Jagdishrai Goyal, in connection with an alleged loan fraud involving about ₹538.62 crore of the Canara Bank.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm