ಬ್ರೇಕಿಂಗ್ ನ್ಯೂಸ್
04-09-23 01:58 pm HK News Desk ದೇಶ - ವಿದೇಶ
ಚೆನ್ನೈ, ಸೆ.4: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್, ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.
ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲ್ ಹಾಕಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಸವಾಲೆಸೆದಿದ್ದಾರೆ.
ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನು ನಿರಂತರವಾಗಿ ಹೇಳುತ್ತೇನೆ. ಆದರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡಂ (ದ್ರಾವಿಡರು) ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಾದರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.
ನನ್ನ ಹೇಳಿಕೆ ಬಿಜೆಪಿ ತಿರುಚಿದೆ ;
ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ INDIA ಒಕ್ಕೂಟವನ್ನ ಕಂಡರೆ ಭಯ. ಐಎನ್ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ. ಬಿಜೆಪಿಯವರು ನನ್ನ ವಿರುದ್ಧ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ.
Facing criticism from the Bharatiya Janata Party (BJP) over his remarks against Sanatan Dharma, Tamil Nadu Chief Minister M K Stalin’s son and minister Udhayanidhi Sunday said he was ready to face “whatever cases they file” against him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm