ಬ್ರೇಕಿಂಗ್ ನ್ಯೂಸ್
04-09-23 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.4: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಸ್ಟಾಲಿನ್ ತಲೆ ಕಡಿದರೆ ಹತ್ತು ಕೋಟಿ ಕೊಡುತ್ತೇನೆ ಎಂದು ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸೋಮವಾರ ಖಡ್ಗ ಬಳಸಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಭಾವಚಿತ್ರದ ಸಾಂಕೇತಿಕ 'ಶಿರಚ್ಛೇದ' ನಡೆಸಿದ ಪರಮಹಂಸ ಆಚಾರ್ಯ ಅವರು, ಆತನ ಪೋಸ್ಟರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಆನಂತರ ಸಚಿವ ಉದಯನಿಧಿ ಸ್ಟಾಲಿನ್ ತಲೆಯನ್ನು ಯಾರಾದರೂ ಕಡಿದು ತಂದರೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಮಾತನಾಡಿದ ಆಚಾರ್ಯ, ಸನಾತನ ಧರ್ಮ ಲಕ್ಷಾಂತರ ವರ್ಷಗಳಿಂದ ಬೆಳೆದು ಬಂದಿದೆ. ಇದಕ್ಕೆ ಆದಿ, ಅಂತ್ಯವಿಲ್ಲ. ಉಳಿದವು ಎರಡು ಸಾವಿರ ವರ್ಷಗಳ ಈಚೆಗೆ ಹುಟ್ಟಿ ಬಂದಿವೆ ಅಷ್ಟೇ. ಭೂಮಿಯಲ್ಲಿ ಅಳಿಯದೆ ಉಳಿದಿರುವುದು ಸನಾತನ ಧರ್ಮ ಅಷ್ಟೇ. ಇದನ್ನು ಅಂತ್ಯಗೊಳಿಸುತ್ತೇನೆ ಎಂದವರನ್ನು ಈ ಧರ್ಮವೇ ಅಂತ್ಯಗೊಳಿಸಿದೆ. ಈ ಧರ್ಮವನ್ನು ಯಾರಿಂದಲೂ ಅಂತ್ಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆಚಾರ್ಯ ಪರಮಹಂಸರು ಈ ಹಿಂದೆಯೂ ಇಂತಹ ಹೇಳಿಕೆಗಳಿಂದ ವಿವಾದಗಳನ್ನು ಹುಟ್ಟುಹಾಕಿದ್ದರು. ಈ ಹಿಂದೆ, ರಾಮಚರಿತ ಮಾನಸ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಹಾರದ ಸಚಿವರ ನಾಲಿಗೆಯನ್ನು ಕತ್ತರಿಸುವಂತೆ ಹೇಳಿ 10 ಕೋಟಿ ರೂ. ಬಹುಮಾನ ಘೋಷಿಸಿದ್ದರು.
ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ವಿರುದ್ಧವೂ ಬೆದರಿಕೆ ಹಾಕಿದ್ದರು. ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಿದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದು, ದೇಶಾದ್ಯಂತ ಕೋಲಾಹಲ ಎಬ್ಬಿಸಿದೆ.
Tamil Nadu Chief Minister MK Stalin's son Udhayanidhi Stalin is facing ire from all over the country for his controversial remarks against the Sanatana Dharma. Expressing his anger over the remarks of DMK leader and Tamil Nadu minister, Ayodhya saint Paramhans Acharya announced a cash reward of RS 10 crore for anyone who beheads the leader. He also symbolically beheaded Udhayanidhi Stalin.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 04:29 pm
HK News Desk
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm