ಬ್ರೇಕಿಂಗ್ ನ್ಯೂಸ್
04-09-23 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.4: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಸ್ಟಾಲಿನ್ ತಲೆ ಕಡಿದರೆ ಹತ್ತು ಕೋಟಿ ಕೊಡುತ್ತೇನೆ ಎಂದು ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸೋಮವಾರ ಖಡ್ಗ ಬಳಸಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಭಾವಚಿತ್ರದ ಸಾಂಕೇತಿಕ 'ಶಿರಚ್ಛೇದ' ನಡೆಸಿದ ಪರಮಹಂಸ ಆಚಾರ್ಯ ಅವರು, ಆತನ ಪೋಸ್ಟರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಆನಂತರ ಸಚಿವ ಉದಯನಿಧಿ ಸ್ಟಾಲಿನ್ ತಲೆಯನ್ನು ಯಾರಾದರೂ ಕಡಿದು ತಂದರೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಮಾತನಾಡಿದ ಆಚಾರ್ಯ, ಸನಾತನ ಧರ್ಮ ಲಕ್ಷಾಂತರ ವರ್ಷಗಳಿಂದ ಬೆಳೆದು ಬಂದಿದೆ. ಇದಕ್ಕೆ ಆದಿ, ಅಂತ್ಯವಿಲ್ಲ. ಉಳಿದವು ಎರಡು ಸಾವಿರ ವರ್ಷಗಳ ಈಚೆಗೆ ಹುಟ್ಟಿ ಬಂದಿವೆ ಅಷ್ಟೇ. ಭೂಮಿಯಲ್ಲಿ ಅಳಿಯದೆ ಉಳಿದಿರುವುದು ಸನಾತನ ಧರ್ಮ ಅಷ್ಟೇ. ಇದನ್ನು ಅಂತ್ಯಗೊಳಿಸುತ್ತೇನೆ ಎಂದವರನ್ನು ಈ ಧರ್ಮವೇ ಅಂತ್ಯಗೊಳಿಸಿದೆ. ಈ ಧರ್ಮವನ್ನು ಯಾರಿಂದಲೂ ಅಂತ್ಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆಚಾರ್ಯ ಪರಮಹಂಸರು ಈ ಹಿಂದೆಯೂ ಇಂತಹ ಹೇಳಿಕೆಗಳಿಂದ ವಿವಾದಗಳನ್ನು ಹುಟ್ಟುಹಾಕಿದ್ದರು. ಈ ಹಿಂದೆ, ರಾಮಚರಿತ ಮಾನಸ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಹಾರದ ಸಚಿವರ ನಾಲಿಗೆಯನ್ನು ಕತ್ತರಿಸುವಂತೆ ಹೇಳಿ 10 ಕೋಟಿ ರೂ. ಬಹುಮಾನ ಘೋಷಿಸಿದ್ದರು.
ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ವಿರುದ್ಧವೂ ಬೆದರಿಕೆ ಹಾಕಿದ್ದರು. ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಿದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದು, ದೇಶಾದ್ಯಂತ ಕೋಲಾಹಲ ಎಬ್ಬಿಸಿದೆ.
Tamil Nadu Chief Minister MK Stalin's son Udhayanidhi Stalin is facing ire from all over the country for his controversial remarks against the Sanatana Dharma. Expressing his anger over the remarks of DMK leader and Tamil Nadu minister, Ayodhya saint Paramhans Acharya announced a cash reward of RS 10 crore for anyone who beheads the leader. He also symbolically beheaded Udhayanidhi Stalin.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm