ಬ್ರೇಕಿಂಗ್ ನ್ಯೂಸ್
07-09-23 07:22 pm HK News Desk ದೇಶ - ವಿದೇಶ
ನವದೆಹಲಿ, ಸೆ 07: ಗಣಿಯೊಳಗೆ ಸಿಲುಕಿದ 65 ಕಾರ್ಮಿಕರ ರಕ್ಷಣೆಯ ಕಥೆಯುಳ್ಳ ಅಕ್ಷಯ್ ಕುಮಾರ್ ನಟನೆಯ ‘ಮಿಷನ್ ರಾಣಿಗಂಜ್: ದಿ ಗ್ರೇಟ್ ಇಂಡಿಯಾ ರೆಸ್ಕ್ಯೂ’ ಚಿತ್ರದಲ್ಲಿದ್ದ ‘ಇಂಡಿಯಾ’ ಪದವನ್ನು ಈಗ ‘ಭಾರತ್’ ಎಂದು ಬದಲಿಸಿರುವ ಸಂಗತಿ ಈಗ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಜಿ20 ಶೃಂಗದಲ್ಲಿ ಪಾಲ್ಗೊಳ್ಳುವ ವಿಶ್ವದ ನಾಯಕರಿಗೆ ರಾಷ್ಟ್ರಪತಿ ನೀಡಿರುವ ಭೋಜನಕೂಟದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಮುದ್ರಿಸಿದ ನಂತರ ಇಂಡಿಯಾ ಹಾಗೂ ಭಾರತ್ ಎಂಬ ಹೆಸರಿನ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಚರ್ಚೆಗೆ ಮಿಷನ್ ರಾಣಿಗಂಜ್ ಚಿತ್ರ ಈಗ ಹೊಸ ಸೇರ್ಪಡೆ.
ಹೆಸರು ಬದಲಾವಣೆ ಕುರಿತು ಅಕ್ಷಯ್ ಕುಮಾರ್ ಅವರು ತಮ್ಮ ಮೈಕ್ರೊ ಬ್ಲಾಗಿಂಗ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಟ್ವೀಟ್ ಕುರಿತು ವ್ಯಾಪಕ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿವೆ. ಅಕ್ಷಯ್ ಕುಮಾರ್ ಅವರು ತಮ್ಮ ಹಿಂದಿನ ಟ್ವೀಟ್ನಲ್ಲಿ ಚಿತ್ರದ ಹೆಸರಿನಲ್ಲಿದ್ದ ‘ಇಂಡಿಯಾ’ವನ್ನು ಬಳಸಿದ್ದರು. ಆದರೆ ಆ ಟ್ವೀಟ್ ಈಗ ಎಲ್ಲಿ ಹೋಯಿತು? ಎಂದು ಕೆಲವರು ಪ್ರಶ್ನಿಸಿದ್ದಾರೆ.
ಹಾಗಿದ್ದರೆ ನಿಮ್ಮ ಮುಂದಿನ ಚಿತ್ರವೂ ’ಭಾರತ್’ ಆಗಿರುತ್ತದೆಯೇ ಎಂದು ಮತ್ತೊಬ್ಬರು ಕೇಳಿದ್ದಾರೆ. ಕಳೆದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಭಾರತದ ಪೌರತ್ವ ಪಡೆದಿರುವ ಅಕ್ಷಯ್ ಕುಮಾರ್ ಅವರ ಕೆನಡಾ ಪೌರತ್ವದ ಕುರಿತೂ ಎಕ್ಸ್ ವೇದಿಕೆಯಲ್ಲಿ ಚರ್ಚೆಗಳು ನಡೆದಿವೆ.
ಮಿಷನ್ ರಾಣಿಗಂಜ್ ಚಿತ್ರವು ಕಲ್ಲಿದ್ದಲ್ಲಿ ಗಣಿ ಕುರಿತಾಗಿದ್ದು, ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಎಂಬುವವರ ಜೀವನಾಧಾರಿತವಾಗಿದೆ. 1989ರಲ್ಲಿ ಕಲ್ಲಿದ್ದಲ್ಲು ಗಣಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಯಲ್ಲಿ ಅವರು ಮಹತ್ತರ ಪಾತ್ರ ವಹಿಸಿದ್ದರು. ಚಿತ್ರದಲ್ಲಿ ಪರಿಣೀತಿ ಛೋಪ್ರಾ, ಕುಮುದ್ ಮಿಶ್ರಾ, ಪವನ್ ಮಲ್ಹೋತ್ರಾ, ರವಿ ಕಿಶನ್, ವರುಣ್ ಬಡೋಲಾ, ದಿಬ್ಯೇಂದು ಭಟ್ಟಾಚಾರ್ಯ, ರಾಜೇಶ್ ಶರ್ಮಾ, ವಿಜೇಂದ್ರ ಸೆಕ್ಸೆನಾ ನಟಿಸಿದ್ದಾರೆ. ಟಿನು ಸುರೇಶ್ ದೇಸಾಯಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
Akshay Kumar is back with a new film, and it has an interesting ‘Bharat’ connection. The actor dropped the motion poster of Mission Raniganj on Wednesday, but the internet noticed a couple of altered references to ‘Bharat’ in his Instagram post.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm