ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm