ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm