ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 04:29 pm
HK News Desk
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm