ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 04:29 pm
HK News Desk
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm