ಬ್ರೇಕಿಂಗ್ ನ್ಯೂಸ್
12-09-23 09:39 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.12: ಕೋಝಿಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ.
ಇದಲ್ಲದೆ, ಮೃತರ ನಿಕಟ ಸಂಬಂಧಿಗಳಾದ ನಾಲ್ಕು ಮಂದಿ ನಿಫಾ ವೈರಸ್ ಸೋಂಕಿಗೆ ಒಳಗಾಗಿರುವ ಬಗ್ಗೆ ಶಂಕಿಸಲಾಗಿದ್ದು, ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಇತ್ತೀಚೆಗೆ ಇಬ್ಬರು ಸಾವನ್ನಪ್ಪಿದ್ದು ನಿಫಾ ವೈರಸ್ ಸೋಂಕು ತಗಲಿದ್ದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಮೃತರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ನಿಫಾ ವೈರಸ್ ಸೋಂಕು ದೃಢಪಟ್ಟಿದೆ. ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಆಗಸ್ಟ್ 30ರಂದು ಕೋಯಿಕ್ಕೋಡ್ನಲ್ಲಿ ಮೊದಲ ಶಂಕಿತ ವ್ಯಕ್ತಿ ಸಾವನ್ನಪ್ಪಿದ್ದರು. 49 ವರ್ಷದ ಇವರು, ಆ.27ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ಈ ವ್ಯಕ್ತಿಯ ಮಾದರಿಯನ್ನು ನಿಫಾ ವೈರಸ್ ಶಂಕೆಯಲ್ಲಿ ಪರೀಕ್ಷೆ ನಡೆಸಿರಲಿಲ್ಲ. ಈತನ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.

ಆಯಂಚೇರಿ ಮೂಲದ 40 ವರ್ಷದ ವ್ಯಕ್ತಿಯೊಬ್ಬರು ವಡಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋಯಿಕ್ಕೋಡ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಸೋಮವಾರ ಮೃತಪಟ್ಟಿದ್ದರು. ರೋಗ ಲಕ್ಷಣಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಆಸ್ಪತ್ರೆ ವೈದ್ಯರು ಹೆಚ್ಚುವರಿ ಪರೀಕ್ಷೆಗೆ ರವಾನಿಸಿದ್ದರು. ಅಲ್ಲದೇ, ಮೃತದೇಹವನ್ನು ಸಂಬಂಧಿಕರಿಗೆ ವೈದ್ಯರು ಹಸ್ತಾಂತರಿಸಿರಲಿಲ್ಲ. ಇದೀಗ ಇಬ್ಬರಿಗೂ ನಿಫಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.
ಮೃತಪಟ್ಟ ವ್ಯಕ್ತಿಗಳ ಸಂಪರ್ಕದಲ್ಲಿದ್ದ 75 ಜನರ ಪಟ್ಟಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದ್ದು ನಿಗಾ ವಹಿಸಿದೆ. ಈ ಪೈಕಿ ಮೃತ ವ್ಯಕ್ತಿಯ ಮಕ್ಕಳಾದ 5 ಮತ್ತು 9 ವರ್ಷದ ಇಬ್ಬರು ಮತ್ತು 22 ವರ್ಷದ ಸಂಬಂಧಿ ಹಾಗೂ ಒಂಬತ್ತು ತಿಂಗಳ ಮಗುವೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಇದರಲ್ಲಿ 9 ವರ್ಷದ ಬಾಲಕನ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ಇವರ ಮಾದರಿಗಳನ್ನು ಸಹ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. 2018ರ ಮೇನಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ದೃಢಪಟ್ಟಿತ್ತು. 2021ರಲ್ಲಿ ಚಾತಮಂಗಲಂನಲ್ಲಿ 12 ವರ್ಷದ ಬಾಲಕ ನಿಫಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದು ದೃಢವಾಗಿತ್ತು.
The Kerala Health Department sounded a health alert in Kozhikode district on Monday following two "unnatural" deaths suspected to be due to the Nipah virus infection.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm