ಬ್ರೇಕಿಂಗ್ ನ್ಯೂಸ್
16-09-23 03:26 pm HK Desk news ದೇಶ - ವಿದೇಶ
ಚೆನ್ನೈ, ಸೆ.16: ಉಗ್ರ ತರಬೇತಿ ಹಾಗೂ ನೇಮಕಾತಿ ಮಾಡಿಕೊಳ್ಳುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ ಸುಮಾರು 30 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾ ನಡೆಸಿದೆ.
ಅಧಿಕಾರಿಗಳ ತಂಡ ತಮಿಳುನಾಡಿನ ಕೊಯಮತ್ತೂರು ಮತ್ತು ಚೆನ್ನೈನಲ್ಲೂ ದಾಳಿ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದ್ದು. ದಕ್ಷಿಣ ಭಾರತದಲ್ಲಿ ಉಗ್ರ ತರಬೇತಿ ಕೇಂದ್ರಗಳನ್ನು ನಿರ್ನಾಮ ಮಾಡುವ ಉದ್ದೇಶದಿಂದ ತಪಾಸಣೆ ನಡೆಸಲಾಗಿದೆ ಎಂದು ಎನ್ಐಎ ತಿಳಿಸಿದೆ.
ಕೊಯಮತ್ತೂರಿನ 21 ಸ್ಥಳಗಳು, ಚೆನ್ನೈನ ಮೂರು ಸ್ಥಳಗಳು, ಹೈದರಾಬಾದ್ನ ಐದು ಸ್ಥಳಗಳು ಮತ್ತು ತೆಂಕಶಿಯ ಒಂದು ಸ್ಥಳಗಳಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದೆ ಎನ್ನಲಾಗಿದೆ.
ಕೊಯಮತ್ತೂರಿನಲ್ಲಿ, ಕೋವೈ ಅರೇಬಿಕ್ ಕಾಲೇಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿಯ ಮೇಲೆ ಅರೇಬಿಕ್ ಕಾಲೇಜಿನ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟು ಮಾತ್ರವಲ್ಲದೆ ಕೊಯಮತ್ತೂರು ಕಾರ್ಪೊರೇಷನ್ ನ 82ನೇ ವಾರ್ಡ್ ಕೌನ್ಸಿಲರ್ ಡಿ.ಎಂ.ಕೆ. ಸದಸ್ಯರ ಮನೆಯಲ್ಲೂ ತಪಾಸಣೆ ನಡೆಸಲಾಯಿತು. ಕೊಯಮತ್ತೂರಿನ ಪೆರುಮಾಳ್ ಕೋವಿಲ್ ಸ್ಟ್ರೀಟ್ ನ ಎಂ. ಮುಬಾಶಿರಾ ಅವರ ಮನೆ ಮೇಲೆ ದಾಳಿ ನಡೆಸಿ ಅವರ ಪತಿಯನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಕೊಯಮತ್ತೂರಿನ ಉಕ್ಕಡಮ್ನಲ್ಲಿರುವ ಈಶ್ವರನ್ ಕೋವಿಲ್ ಸ್ಟ್ರೀಟ್ನಲ್ಲಿರುವ ಕೊಟ್ಟೈ ಸಂಗಮೇಶ್ವರರ್ ದೇವಸ್ಥಾನದ ಮುಂಭಾಗದಲ್ಲಿ 2022 ರ ಅಕ್ಟೋಬರ್ 23 ರಂದು ಸ್ಫೋಟ ಸಂಭವಿಸಿತ್ತು. ಈ ಸಂದರ್ಭ ಸುಧಾರಿತ ಸ್ಫೋಟಕ ಸಾಧನದೊಂದಿಗೆ ಕಾರನ್ನು ಓಡಿಸಿದ ಐಸಿಸ್ ಅನುಯಾಯಿ ಜಮೇಶಾ ಮುಬೀನ್ ಸಾವನ್ನಪ್ಪಿದ್ದ. ತನಿಖೆ ನಡೆಸುತ್ತಿದ್ದ ಸಂದರ್ಭ ಅವನು ಕೊಯಮತ್ತೂರಿನ ಕುನಿಯಮುತ್ತೂರಿನಲ್ಲಿ ಕೋವೈ ಅರೇಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ವರ್ಷಗಳ ಹಿಂದೆ ಕಾಲೇಜಿನಲ್ಲಿ ಮುಬೀನ್ ಜೊತೆ 25ಕ್ಕೂ ಹೆಚ್ಚು ಮಂದಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಇದರ ನಡುವೆ, ಚೆನ್ನೈನ ಎನ್ಐಎ ಅಧಿಕಾರಿಗಳು ಕೊಯಮತ್ತೂರಿನ ಅರೇಬಿಕ್ ಕಾಲೇಜಿನಲ್ಲಿ ಕಳೆದ ತಿಂಗಳು ಶೋಧ ಕಾರ್ಯ ನಡೆಸಿದ್ದರು ಎಂದು ತಿಳಿದುಬಂದಿದೆ. ತಮಿಳುನಾಡು ಇಸಿಸ್ ಉಗ್ರ ಸಂಘಟನೆ ಮತ್ತು ಅದರ ನೇಮಕಾತಿ ಮತ್ತು ಆಮೂಲಾಗ್ರೀಕರಣ ಒಳಗೊಂಡಂತೆ ಸಂಸ್ಥೆಯು ದಾಖಲೆಗಳನ್ನು ಸಂಗ್ರಹ ಮಾಡಿದ್ದು, ಹೊಸ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
National Investigation Agency (NIA) conducts raids at 30 locations in both Tamil Nadu and Telangana in ISIS Radicalization and Recruitment case. The raids are underway in 21 locations in Coimbatore, 3 locations in Chennai, 5 locations in Hyderabad/Cyberabad, and 1 location in Tenkasi.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm