ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm