ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm