ಸನಾತನ ಧರ್ಮ ವಿರುದ್ಧ ಹೇಳಿಕೆ ; ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಎ.ರಾಜಾಗೆ ಸುಪ್ರೀಂ ಕೋರ್ಟ್ ನೋಟಿಸ್ 

23-09-23 12:54 pm       HK News Desk   ದೇಶ - ವಿದೇಶ

ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ನವದೆಹಲಿ, ಸೆ.23: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಮಾಜಿ ಸಂಸದ ಎ ರಾಜಾ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದ್ದು  ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆರೋಪ ಹೊತ್ತಿರುವ ಇಬ್ಬರಿಗೂ ನೋಟೀಸ್ ನೀಡಿದೆ.

ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ಸ್ಟಾಲಿನ್ ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವೊಂದು ವಿಚಾರಗಳನ್ನು ನಾವು ವಿರೋಧಿಸುವ ಬದಲು ಸನಾತನ ಧರ್ಮವನ್ನೇ ನಿರ್ಮೂಲನೆ ಮಾಡಿದರೆ ಒಳಿತು, ಹೇಗೆ ನಾವು ಕರೋನಾ, ಮಲೇರಿಯಾ, ಡೆಂಗ್ಯೂ ನಂತಹ ಸೋಂಕುಗಳನ್ನು ನಿರ್ಮೂಲನೆ ಮಾಡುತ್ತೇವೆಯೋ ಅದೇ ರೀತಿ ಸನಾತನ ಧರ್ಮವನ್ನೂ ನಿರ್ಮೂಲನೆ ಮಾಡುವ ಅಗತ್ಯ ಇದೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಕೇಳಿಬಂದಿತ್ತು. ಅದರಂತೆ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

The Supreme Court on Friday issued notices to the Tamil Nadu Government and its minister Udhayanidhi Stalin on a petition seeking registration of an FIR against him for his “eradicate Sanatan Dharma” remark.