ಬ್ರೇಕಿಂಗ್ ನ್ಯೂಸ್
10-11-20 03:43 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 10 : ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ಪಷ್ಟ ಮುನ್ನಡೆ ಪಡೆಯುವತ್ತ ದಾಪುಗಾಲಿಟ್ಟಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಎನ್ ಡಿಎ ಮೈತ್ರಿಕೂಟ 127 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಒಕ್ಕೂಟ 105 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಎಲ್ ಜೆಪಿ 2, ಇತರೇ ಪಕ್ಷಗಳು 9 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಬಿಹಾರದಲ್ಲಿ 243 ಸದಸ್ಯ ಬಲ ಇದ್ದು, ಸರಕಾರ ರಚನೆಗೆ 122 ಸ್ಥಾನಗಳನ್ನು ಪಡೆಯಬೇಕು. ಮೂರು ಅವಧಿಗೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿರುವ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಗೆಲುವು ಕಷ್ಟ ಎನ್ನಲಾಗಿತ್ತು. ಹೆಚ್ಚಿನ ಸಮೀಕ್ಷೆಗಳು ತಲೆಕೆಳಗಾಗುವ ರೀತಿ ಫಲಿತಾಂಶವನ್ನು ಮತದಾರರು ನೀಡಿದ್ದಾರೆ.
ಬಿಜೆಪಿ 80, ಜೆಡಿಯು 48, ಆರ್ ಜೆಡಿ 70, ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಬಿಜೆಪಿ ಇದೇ ಮೊದಲಿಗೆ ಬಿಹಾರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸಿಎಂ ಸ್ಥಾನ ನಿತೀಶ್ ಕುಮಾರ್ ಗೆ ನೀಡುತ್ತಾರಾ ಅಥವಾ ಬಿಜೆಪಿ ಅಭ್ಯರ್ಥಿಯನ್ನು ಸಿಎಂ ಸ್ಥಾನಕ್ಕೆ ತಂದು ಕೂರಿಸುತ್ತಾರೆಯೇ ಅನ್ನುವ ಕುತೂಹಲ ಇದೆ. ಪ್ರಧಾನಿ ಮೋದಿ, ಚುನಾವಣೆಗೆ ಮೊದಲೇ ನಿತೀಶ್ ಕುಮಾರ್ ಅವರೇ ಮುಂದಿನ ಸಿಎಂ ಎಂದು ಹೇಳಿರುವುದರಿಂದ ಫಲಿತಾಂಶ ಬಳಿಕ ಯಾವ ನಿರ್ಧಾರ ಕೈಗೊಳ್ಳುತ್ತಾರೋ ನೋಡಬೇಕು.


ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ನೇತೃತ್ವದಲ್ಲಿ ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿ ಮಹಾಘಟಬಂಧನ್ ಒಕ್ಕೂಟ ಮಾಡಿಕೊಂಡಿದ್ದು ಈ ಬಾರಿ ಜಯದ ನಿರೀಕ್ಷೆಯಲ್ಲಿದ್ದವು. ಆದರೆ, ಈ ಬಾರಿ ಯಾರು ಅಧಿಕಾರಕ್ಕೇರುತ್ತಾರೆ ಎನ್ನುವುದನ್ನು ಈಗಲೇ ಹೇಳುವಂತಿಲ್ಲ. ಕೊನೆಕ್ಷಣದಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ಬಾರಿ ಕೊರೊನಾ ನಡುವೆಯೂ ಅತಿ ಹೆಚ್ಚು ಮತದಾನವಾಗಿದ್ದು, ಯಾರಿಗೆ ಜಯ ತಂದುಕೊಡಲಿದೆ ಎನ್ನುವ ಕುತೂಹಲ ಜನರಲ್ಲಿದೆ.
The counting of votes for 243 assembly constituencies in Bihar is under way. The closely fought elections saw incumbent Nitish Kumar, who is heading the JD(U)-BJP combine, take on the Tejashwi Yadav-led Mahagathbandhan comprising RJD, Congress and Left Parties. As per the current trends, the NDA has pulled ahead of the Grand Alliance with several rounds of voting still left
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am