ಬ್ರೇಕಿಂಗ್ ನ್ಯೂಸ್
10-11-20 03:43 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 10 : ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ಪಷ್ಟ ಮುನ್ನಡೆ ಪಡೆಯುವತ್ತ ದಾಪುಗಾಲಿಟ್ಟಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಎನ್ ಡಿಎ ಮೈತ್ರಿಕೂಟ 127 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಒಕ್ಕೂಟ 105 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಎಲ್ ಜೆಪಿ 2, ಇತರೇ ಪಕ್ಷಗಳು 9 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಬಿಹಾರದಲ್ಲಿ 243 ಸದಸ್ಯ ಬಲ ಇದ್ದು, ಸರಕಾರ ರಚನೆಗೆ 122 ಸ್ಥಾನಗಳನ್ನು ಪಡೆಯಬೇಕು. ಮೂರು ಅವಧಿಗೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿರುವ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಗೆಲುವು ಕಷ್ಟ ಎನ್ನಲಾಗಿತ್ತು. ಹೆಚ್ಚಿನ ಸಮೀಕ್ಷೆಗಳು ತಲೆಕೆಳಗಾಗುವ ರೀತಿ ಫಲಿತಾಂಶವನ್ನು ಮತದಾರರು ನೀಡಿದ್ದಾರೆ.
ಬಿಜೆಪಿ 80, ಜೆಡಿಯು 48, ಆರ್ ಜೆಡಿ 70, ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಬಿಜೆಪಿ ಇದೇ ಮೊದಲಿಗೆ ಬಿಹಾರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸಿಎಂ ಸ್ಥಾನ ನಿತೀಶ್ ಕುಮಾರ್ ಗೆ ನೀಡುತ್ತಾರಾ ಅಥವಾ ಬಿಜೆಪಿ ಅಭ್ಯರ್ಥಿಯನ್ನು ಸಿಎಂ ಸ್ಥಾನಕ್ಕೆ ತಂದು ಕೂರಿಸುತ್ತಾರೆಯೇ ಅನ್ನುವ ಕುತೂಹಲ ಇದೆ. ಪ್ರಧಾನಿ ಮೋದಿ, ಚುನಾವಣೆಗೆ ಮೊದಲೇ ನಿತೀಶ್ ಕುಮಾರ್ ಅವರೇ ಮುಂದಿನ ಸಿಎಂ ಎಂದು ಹೇಳಿರುವುದರಿಂದ ಫಲಿತಾಂಶ ಬಳಿಕ ಯಾವ ನಿರ್ಧಾರ ಕೈಗೊಳ್ಳುತ್ತಾರೋ ನೋಡಬೇಕು.
ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ನೇತೃತ್ವದಲ್ಲಿ ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿ ಮಹಾಘಟಬಂಧನ್ ಒಕ್ಕೂಟ ಮಾಡಿಕೊಂಡಿದ್ದು ಈ ಬಾರಿ ಜಯದ ನಿರೀಕ್ಷೆಯಲ್ಲಿದ್ದವು. ಆದರೆ, ಈ ಬಾರಿ ಯಾರು ಅಧಿಕಾರಕ್ಕೇರುತ್ತಾರೆ ಎನ್ನುವುದನ್ನು ಈಗಲೇ ಹೇಳುವಂತಿಲ್ಲ. ಕೊನೆಕ್ಷಣದಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ಬಾರಿ ಕೊರೊನಾ ನಡುವೆಯೂ ಅತಿ ಹೆಚ್ಚು ಮತದಾನವಾಗಿದ್ದು, ಯಾರಿಗೆ ಜಯ ತಂದುಕೊಡಲಿದೆ ಎನ್ನುವ ಕುತೂಹಲ ಜನರಲ್ಲಿದೆ.
The counting of votes for 243 assembly constituencies in Bihar is under way. The closely fought elections saw incumbent Nitish Kumar, who is heading the JD(U)-BJP combine, take on the Tejashwi Yadav-led Mahagathbandhan comprising RJD, Congress and Left Parties. As per the current trends, the NDA has pulled ahead of the Grand Alliance with several rounds of voting still left
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm