ಬ್ರೇಕಿಂಗ್ ನ್ಯೂಸ್
29-09-23 02:47 pm HK News Desk ದೇಶ - ವಿದೇಶ
ಕರಾಚಿ, ಸೆ.29: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಬಲಿಯಾದವರ ಪೈಕಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕೂಡ ಸೇರಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಬಲೋಚಿಸ್ತಾನದ ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಸಮೀಪ ಸ್ಫೋಟ ಸಂಭವಿಸಿದೆ. ಅಲ್ಫಾಹ್ ರಸ್ತೆಯ ಮದೀನಾ ಮಸೀದಿ ಸಮೀಪ ಈದ್ ಇ ಮಿಲಾದುನ್ ನಬಿ ಮೆರವಣಿಗೆಗಾಗಿ ನೂರಾರು ಜನರು ಸೇರಿದ್ದರು. ಇದು ಆತ್ಮಾಹುತಿ ದಾಳಿ ಎಂದು ನಗರ ಸ್ಟೇಷನ್ ಹೌಸ್ ಅಧಿಕಾರಿ ಜಾವೇದ್ ಲೆಹ್ರಿ ತಿಳಿಸಿದ್ದಾರೆ.

ಈ ಸ್ಫೋಟ ಬೃಹತ್ ಪ್ರಮಾಣದ್ದಾಗಿದೆ ಎಂದು ಮಸ್ತುಂಗ್ ಸಹಾಯಕ ಕಮಿಷನರ್ ಅಟ್ಟಾ ಉಲ್ ಮುನಿಮ್ ತಿಳಿಸಿದ್ದಾರೆ. ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ, ಮೃತರಲ್ಲಿ ಮಸ್ತುಂಗ್ ಡಿಎಸ್ಪಿ ನವಾಜ್ ಗಶ್ಕೋರಿ ಸೇರಿದ್ದಾರೆ.
ಇದು ಆತ್ಮಾಹುತಿ ದಾಳಿ ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾಗಿ ಡಾನ್ ಪತ್ರಿಕೆ ತಿಳಿಸಿದೆ. ಮಸೀದಿಯ ಸುತ್ತಮುತ್ತಲೂ ಹತ್ತಾರು ಶವಗಳು ಛಿದ್ರಗೊಂಡು ಬಿದ್ದಿರುವುದು ಸ್ಫೋಟದ ಬಳಿಕದ ವಿಡಿಯೋ ಹಾಗೂ ಚಿತ್ರಗಳಲ್ಲಿ ಕಾಣಿಸಿದೆ. ದೇಹಗಳಿಂದ ಬೇರ್ಪಟ್ಟ ಕೈ ಕಾಲುಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಘಟನೆಯ ಭೀಕರ ಸ್ವರೂಪಕ್ಕೆ ಸಾಕ್ಷಿಯಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 28 ಮೃತದೇಹಗಳನ್ನು ಶಹೀದ್ ನವಾಬ್ ಗೌಸ್ ಬಕ್ಷ್ ರೈಸಿನಿ ಸ್ಮಾರಕ ಆಸ್ಪತ್ರೆಗೆ ತರಲಾಗಿದೆ. ಇನ್ನು 22 ಶವಗಳನ್ನು ಮಸ್ತುಂಗ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಡಾ, ಸಯೀದ್ ಮಿರ್ವಾನಿ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಇದೇ ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಸ್ಫೋಟ ಇದಾಗಿದೆ. ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜಮಿಯತ್ ಉಲೆಮಾ- ಇ- ಇಸ್ಲಾಮ್ ಫಾಜಿ (ಜೆಯುಐ- ಎಫ್) ನಾಯಕ ಹಫೀಜ್ ಹಮ್ದುಲ್ಲಾ ಸೇರಿದಂತೆ ಅನೇಕರು ಗಾಯಗೊಂಡಿದ್ದರು.
At least 34 people were killed and more than 100 wounded Friday by a “suicide blast” near a mosque in Pakistan’s Balochistan province, local media reported. The explosion happened in the Mustang district of the southwestern province as people gathered for a religious procession marking the birthday of Prophet Mohammed, Pakistan’s Dawn reported citing the assistant commissioner of Mastung district.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm