ಬ್ರೇಕಿಂಗ್ ನ್ಯೂಸ್
29-09-23 02:47 pm HK News Desk ದೇಶ - ವಿದೇಶ
ಕರಾಚಿ, ಸೆ.29: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಬಲಿಯಾದವರ ಪೈಕಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕೂಡ ಸೇರಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಬಲೋಚಿಸ್ತಾನದ ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಸಮೀಪ ಸ್ಫೋಟ ಸಂಭವಿಸಿದೆ. ಅಲ್ಫಾಹ್ ರಸ್ತೆಯ ಮದೀನಾ ಮಸೀದಿ ಸಮೀಪ ಈದ್ ಇ ಮಿಲಾದುನ್ ನಬಿ ಮೆರವಣಿಗೆಗಾಗಿ ನೂರಾರು ಜನರು ಸೇರಿದ್ದರು. ಇದು ಆತ್ಮಾಹುತಿ ದಾಳಿ ಎಂದು ನಗರ ಸ್ಟೇಷನ್ ಹೌಸ್ ಅಧಿಕಾರಿ ಜಾವೇದ್ ಲೆಹ್ರಿ ತಿಳಿಸಿದ್ದಾರೆ.

ಈ ಸ್ಫೋಟ ಬೃಹತ್ ಪ್ರಮಾಣದ್ದಾಗಿದೆ ಎಂದು ಮಸ್ತುಂಗ್ ಸಹಾಯಕ ಕಮಿಷನರ್ ಅಟ್ಟಾ ಉಲ್ ಮುನಿಮ್ ತಿಳಿಸಿದ್ದಾರೆ. ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ, ಮೃತರಲ್ಲಿ ಮಸ್ತುಂಗ್ ಡಿಎಸ್ಪಿ ನವಾಜ್ ಗಶ್ಕೋರಿ ಸೇರಿದ್ದಾರೆ.
ಇದು ಆತ್ಮಾಹುತಿ ದಾಳಿ ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾಗಿ ಡಾನ್ ಪತ್ರಿಕೆ ತಿಳಿಸಿದೆ. ಮಸೀದಿಯ ಸುತ್ತಮುತ್ತಲೂ ಹತ್ತಾರು ಶವಗಳು ಛಿದ್ರಗೊಂಡು ಬಿದ್ದಿರುವುದು ಸ್ಫೋಟದ ಬಳಿಕದ ವಿಡಿಯೋ ಹಾಗೂ ಚಿತ್ರಗಳಲ್ಲಿ ಕಾಣಿಸಿದೆ. ದೇಹಗಳಿಂದ ಬೇರ್ಪಟ್ಟ ಕೈ ಕಾಲುಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಘಟನೆಯ ಭೀಕರ ಸ್ವರೂಪಕ್ಕೆ ಸಾಕ್ಷಿಯಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 28 ಮೃತದೇಹಗಳನ್ನು ಶಹೀದ್ ನವಾಬ್ ಗೌಸ್ ಬಕ್ಷ್ ರೈಸಿನಿ ಸ್ಮಾರಕ ಆಸ್ಪತ್ರೆಗೆ ತರಲಾಗಿದೆ. ಇನ್ನು 22 ಶವಗಳನ್ನು ಮಸ್ತುಂಗ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಡಾ, ಸಯೀದ್ ಮಿರ್ವಾನಿ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಇದೇ ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಸ್ಫೋಟ ಇದಾಗಿದೆ. ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜಮಿಯತ್ ಉಲೆಮಾ- ಇ- ಇಸ್ಲಾಮ್ ಫಾಜಿ (ಜೆಯುಐ- ಎಫ್) ನಾಯಕ ಹಫೀಜ್ ಹಮ್ದುಲ್ಲಾ ಸೇರಿದಂತೆ ಅನೇಕರು ಗಾಯಗೊಂಡಿದ್ದರು.
At least 34 people were killed and more than 100 wounded Friday by a “suicide blast” near a mosque in Pakistan’s Balochistan province, local media reported. The explosion happened in the Mustang district of the southwestern province as people gathered for a religious procession marking the birthday of Prophet Mohammed, Pakistan’s Dawn reported citing the assistant commissioner of Mastung district.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm