ಬ್ರೇಕಿಂಗ್ ನ್ಯೂಸ್
03-10-23 06:57 pm HK News Desk ದೇಶ - ವಿದೇಶ
ಕೊಚ್ಚಿ, ಅ.3: ಕೇರಳದ ಸಿರೋ- ಮಲಬಾರ್ ಚರ್ಚ್ ಸಂಸ್ಥೆಯ ಇಡುಕ್ಕಿ ಡಯಾಸಿಸ್ಗೆ ಸೇರಿದ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಕ್ಯಾಥೋಲಿಕ್ ಚರ್ಚ್ನ ಪಾದ್ರಿ ಫಾದರ್ ಕುರಿಯಾಕೋಸ್ ಮಟ್ಟಂ ಅವರು ಸೋಮವಾರ ಇಡುಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್ ಅಜಿ ಅವರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಇಡುಕ್ಕಿ ವಲಯ ಚರ್ಚ್ ಡಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಂಕುವಾ ಸೇಂಟ್ ಥಾಮಸ್ ಚರ್ಚ್ನ ಪ್ಯಾರಿಶ್ ಹುದ್ದೆಯಿಂದ ಫಾದರ್ ಮಟ್ಟಂ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್ ತಿಳಿಸಿದೆ. ಚರ್ಚ್ ಪಾದ್ರಿ ಯಾವುದೇ ರಾಜಕೀಯ ಪಕ್ಷ ಸೇರಿಕೊಳ್ಳುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತೆ ಇಲ್ಲ ಎಂದು ಕೆನಾನ್ ಕಾನೂನು ಹೇಳುತ್ತದೆ. ಅದರಂತೆ, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಚರ್ಚ್ ವಕ್ತಾರರೊಬ್ಬರು ತಿಳಿಸಿದ್ದಾರೆ. 74 ವರ್ಷದ ಪಾದ್ರಿ ಮಟ್ಟಂ ಅವರು ಕೆಲವೇ ತಿಂಗಳಲ್ಲಿ ಪಾದ್ರಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
ಮಣಿಪುರ ಹಿಂಸಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕ್ಯಾಥೋಲಿಕ್ ಚರ್ಚ್ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಪಾದ್ರಿ ಕೇಸರಿ ಪಾಳೆಯ ಸೇರ್ಪಡೆಯಾಗಿದ್ದು ಪ್ರಮುಖರನ್ನು ಇರಿಸು ಮುರಿಸು ಮಾಡಿತ್ತು. ಪಾದ್ರಿ ಜೊತೆಗಿನ ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಿ, ದೇಶದಲ್ಲಿನ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದ ನಂತರ ಫಾದರ್ ಮಟ್ಟಂ ಅವರು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
A Catholic priest under the Idukki diocese of the Syro-Malabar church was relieved of his duties as vicar on Monday, hours after he joined the BJP. Fr Kuriakose Mattam received the primary membership of the BJP from the party's Idukki district president K S Aji on Monday. Within hours, the Idukki diocese initiated action against him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm