ಬ್ರೇಕಿಂಗ್ ನ್ಯೂಸ್
12-10-23 12:16 pm HK News Desk ದೇಶ - ವಿದೇಶ
ಬಿಹಾರ, ಅ.12: ದೆಹಲಿ–ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ ರೈಲಿನ ಆರು ಬೋಗಿಗಳು ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ ಹಳಿ ತಪ್ಪಿದ ನಂತರ ಭಾರತೀಯ ರೈಲ್ವೆಯು ಎರಡು ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, 21 ರೈಲುಗಳ ಮಾರ್ಗವನ್ನು ಬದಲಾಯಿಸಿದೆ.
ರಾತ್ರಿ ಸುಮಾರು 9.53ಕ್ಕೆ ಘಟನೆ ಸಂಭವಿಸಿದ್ದು, ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ ಸೇರಿದಂತೆ ಆರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಬಕ್ಸರ್ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ.


ಘಟನೆಯಲ್ಲಿ ಸುಮಾರು 70 ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ರವಾಸಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಪಡೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಾಶಿ ಪಾಟ್ನ ಜನ ಶತಾಬ್ದಿ ಎಕ್ಸ್ಪ್ರೆಸ್ (15125) ಮತ್ತು ಪಾಟ್ನ ಕಾಶಿ ಜನ ಶತಾಬ್ದಿ ಎಕ್ಸ್ಪ್ರೆಸ್ (15126) ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೆ ವಲಯದ ಹೇಳಿಕೆ ತಿಳಿಸಿದೆ.


ಪುಣೆ–ದಾನಪುರ್ ಎಸ್ಎಫ್ ಎಕ್ಸ್ಪ್ರೆಸ್, ಪಟ್ಲಿಪುತ್ರ ಎಸ್ಎಫ್ ಎಕ್ಸ್ಪ್ರೆಸ್, ದಿಬ್ರುಗಢ ರಾಜಧಾನಿ ಎಕ್ಸ್ಪ್ರೆಸ್, ವಿಕ್ರಮಶಿಲಾ ಎಕ್ಸ್ಪ್ರೆಸ್, ರಾಜೇಂದ್ರ ನಗರ ಟರ್ಮಿನಲ್ ತೇಜಸ್ ರಾಜಧಾನಿ ಎಕ್ಸ್ಪ್ರೆಸ್ ಸೇರಿದಂತೆ ಒಟ್ಟು 21 ರೈಲುಗಳನ್ನು ಪರ್ಯಾಯ ಮಾರ್ಗಗಳಿಗೆ ಬದಲಾಯಿಸಲಾಗಿದೆ.
ದೆಹಲಿ–ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ 23 ಬೋಗಿಗಳನ್ನು ಹೊಂದಿದ್ದು, ಬುಧವಾರ ಬೆಳಿಗ್ಗೆ ಸುಮಾರು 7.40 ಗಂಟೆಗೆ ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ನಿಂದ ಕಾಮಾಕ್ಯಕ್ಕೆ ಹೊರಟಿತ್ತು.
ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ‘ಬಕ್ಸರ್ನ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಜಿಲ್ಲಾಡಳಿತ, ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶೀಘ್ರದಲ್ಲೆ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಳ್ಳಲಿದ್ದು, ನಂತರ ಹಳಿಗಳ ಮರುಸ್ಥಾಪನೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದ್ದಾರೆ.
ಜನರಿಗೆ ತ್ವರಿತ ಪರಿಹಾರವನ್ನು ಒದಗಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಇಲಾಖೆಗಳಿಗೆ ತಿಳಿಸಲಾಗಿದೆ. ಬಕ್ಸರ್ ಮತ್ತು ಭೋಜಪುರದ ಜಿಲ್ಲಾಧಿಕಾರಿಗಳ ಬಳಿಯೂ ಮಾತನಾಡಿದ್ದೇನೆ ಮತ್ತು ಶೀಘ್ರದಲ್ಲೆ ಸ್ಥಳಕ್ಕೆ ತಲುಪಲು, ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸೂಚನೆಗಳನ್ನು ನೀಡಿದ್ದೇನೆ’ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.
Indian Railways cancelled ten trains and diverted 21 after several coaches of 12506 Delhi-Kamakhya North East Express derailed near the Raghunathpur station in Bihar's Buxar district on Wednesday killing at least four people and injuring many others. The derailment occurred at 9:53 pm and at least two AC III Tier coaches had toppled over while four other coaches jumped the tracks.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm