ಬ್ರೇಕಿಂಗ್ ನ್ಯೂಸ್
12-10-23 09:25 pm HK News Desk ದೇಶ - ವಿದೇಶ
ನವದೆಹಲಿ, ಅ.12: ವಿಶ್ವಮಟ್ಟದಲ್ಲಿ ಗಮನಾರ್ಹವಾಗಿ ಬೆಳೆಯುತ್ತಿರುವ ಭಾರತವು ಯುವಜನರಿಗೆ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಹೀಗಾಗಿ ದೇಶದಲ್ಲಿ ನಿರುದ್ಯೋಗ ದರವು ಕಳೆದ 6 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತದ ಆರ್ಥಿಕತೆಯು ವೇಗವಾಗಿ ಪ್ರಗತಿ ಕಾಣುತ್ತಿರುವುದರಿಂದ ಹಲವು ಕ್ಷೇತ್ರಗಳಲ್ಲಿ ಯುವಜನರಿಗೆ ಅವಕಾಶಗಳು ಹೆಚ್ಚಿವೆ. ದೇಶದಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಾಗಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ನಿರುದ್ಯೋಗ ದರವೂ ಕೆಳಮಟ್ಟಕ್ಕೆ ಇಳಿದಿದೆ ಎಂದು ವಿವರಿಸಿದರು.
.jpg)
ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ ನಿರುದ್ಯೋಗವು ವೇಗವಾಗಿ ಕಡಿಮೆಯಾಗುತ್ತಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಸಮಾನವಾಗಿ ತಲುಪುತ್ತಿವೆ. ಇದರ ಪರಿಣಾಮವಾಗಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ ಎಂದು ಪ್ರಧಾನಿ ಹೇಳಿದರು.
ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ದರವೂ ಗಮನಾರ್ಹವಾಗಿ ಹೆಚ್ಚಳ ಕಾಣುತ್ತಿದೆ. ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ವರ್ಷಗಳಲ್ಲಿ ಪ್ರಾರಂಭಿಸಲಾದ ಯೋಜನೆಗಳು ಮತ್ತು ಅಭಿಯಾನಗಳು ಪ್ರಭಾವ ಬೀರಿವೆ. ಹಿಂದಿನ ಸರ್ಕಾರಗಳಲ್ಲಿ ಕೌಶಲಾಭಿವೃದ್ಧಿ ಕುರಿತ ನಿರ್ಲಕ್ಷ್ಯದಿಂದಾಗಿ ಉದ್ಯೋಗಾವಕಾಶಗಳು ಇರಲಿಲ್ಲ. ನಮ್ಮ ಸರ್ಕಾರ ಕೌಶಲ್ಯದ ಮಹತ್ವವನ್ನು ಅರಿತು ಅದಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ರಚಿಸಿ, ಪ್ರತ್ಯೇಕ ಬಜೆಟ್ ನೀಡುತ್ತಿದೆ ಎಂದು ಹೇಳಿದರು
ಕೈಗಾರಿಕೆ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಸಂಸ್ಥೆಗಳು ಕಾಲಘಟ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಸುಮಾರು 5 ಸಾವಿರ ಹೊಸ ಐಟಿಐಗಳನ್ನು (ಕೈಗಾರಿಕಾ ತರಬೇತಿ ಸಂಸ್ಥೆಗಳು) ಸ್ಥಾಪಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಹೊಸ ಐಟಿಐ ಸೀಟುಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಯುವಕರು ಉದ್ಯೋಗಸ್ಥರಾಗುತ್ತಿದ್ದಾರೆ ಎಂಬುದನ್ನು ಪ್ರಧಾನಿ ಮಾಹಿತಿ ನೀಡಿದರು.
ಸರ್ಕಾರ ಯುವಕರ ಕೌಶಲ್ಯದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ನಂಬಿಕೆ ಹೊಂದಿದೆ. ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಯೋಜನೆಯು ಯುವಕರ ಸತ್ವವನ್ನು ಬಲಪಡಿಸಿದೆ. ಈ ಯೋಜನೆಯಡಿ, ಇದುವರೆಗೆ 1.5 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ. ಕೈಗಾರಿಕಾ ಕ್ಲಸ್ಟರ್ಗಳ ಬಳಿ ಹೊಸ ಕೌಶಲ್ಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಉದ್ಯಮವು ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳೊಂದಿಗೆ ಜೊತೆಗೂಡಿ ಕಾರ್ಯ ನಿರ್ವಹಿಸಲಿವೆ. ಇದು ಉದ್ಯೋಗಾವಕಾಶ ಸೃಷ್ಟಿಯ ಜೊತೆಗೆ, ಯುವಕರ ಕೌಶಲ್ಯವೂ ಅಭಿವೃದ್ಧಿಯಾಗುತ್ತದೆ ಎಂದು ಪ್ರಧಾನಿ ತಿಳಿಸಿದರು.
Prime Minister Narendra Modi on Thursday said India’s expanding economy is creating new possibilities for the youth and the unemployment rate in the country is at its lowest level in the last six years.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm