ಬ್ರೇಕಿಂಗ್ ನ್ಯೂಸ್
13-10-23 10:26 am HK News Desk ದೇಶ - ವಿದೇಶ
ನವದೆಹಲಿ, ಅ.13: ಇಸ್ರೇಲ್ ನಲ್ಲಿ ಯುದ್ಧದ ಕಾರಣ ಆತಂಕ ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದೆ. 222 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.
ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.


ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.
The first batch of around 200 Indians, including students, returned to the country from Israel onboard a chartered flight in the early hours of Friday. India has launched Operation Ajay to facilitate the return of those who wish to come back home as a series of brazen attacks on Israeli towns by Hamas militants over the weekend triggered fresh tension in the region.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm