ಬ್ರೇಕಿಂಗ್ ನ್ಯೂಸ್
17-10-23 08:33 pm HK News Desk ದೇಶ - ವಿದೇಶ
ಶಿವಕಾಶಿ, ಅ.17: ಪಟಾಕಿ ತಯಾರಿಕೆಗೆ ಖ್ಯಾತಿಯಾಗಿರುವ ತಮಿಳುನಾಡಿನ ಶಿವಕಾಶಿಯ ಎರಡು ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಮತ್ತು ದೀಪಾವಳಿಯ ಸಂಭ್ರಮದ ಹೊತ್ತಲ್ಲೇ ದುರಂತ ಸಂಭವಿಸಿದೆ.
ವಿರುಧುನಗರ ಸಮೀಪದ ಶಿವಕಾಶಿಯಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ 9 ಮಂದಿ ಬೆಂಕಿಗೆ ಆಹುತಿಯಾದರು. ಘಟನೆಯ ಪ್ರದೇಶ ಸುತ್ತ ದೊಡ್ಡ ಸ್ಫೋಟಕ ಸದ್ದು ಕೇಳಿಬಂದಿತು. ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿದ ಕೆಲ ಕಾರ್ಮಿಕರು ಸುಟ್ಟ ಗಾಯಕ್ಕೀಡಾಗಿದ್ದಾರೆ. ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಇನ್ನೊಂದು ಸ್ಫೋಟವು ರೆಡ್ಡಿಪಟ್ಟಿ ಪ್ರದೇಶದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿತು. ಇಲ್ಲಿ ಓರ್ವ ಕಾರ್ಮಿಕ ಬೆಂಕಿಗೆ ಬಲಿಯಾಗಿದ್ದಾನೆ. ಹಲವು ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿರುವ ಬಾಲಾಜಿ ಟ್ರೇಡರ್ಸ್ನಲ್ಲಿ ಅಕ್ಟೋಬರ್ 7ರಂದು ನಡೆದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಬಾರ್ಡರ್ ಬಳಿ ಇರುವ ಶ್ರೀಬಾಲಾಜಿ ಟ್ರೇಡರ್ಸ್ ಮಾಲೀಕ ನವೀನ್ ರೆಡ್ಡಿ ಅನತಿ ಮೇರೆಗೆ ಸೇಲ್ಸ್ ಮ್ಯಾನ್ ಕೆಲಸಕ್ಕೆ ಬಂದಿದ್ದರು. ವಾಣಿಯಾಂಬಾಡಿಯಿಂದ 12 ಮಂದಿ, ಕಲ್ಲಕುರ್ಚಿಯಿಂದ 15 ಮಂದಿ ಜತೆಗೆ 9 ಮಂದಿ ಬಂದು ಕೆಲಸ ಮಾಡುತ್ತಿದ್ದರು. ಇವರೆಲ್ಲರು ಉಳಿದುಕೊಳ್ಳಲು ಪಟಾಕಿ ಅಂಗಡಿಯ ಮುಂಭಾಗವೇ ರೂಂವೊಂದನ್ನು ಮಾಡಿಕೊಟ್ಟಿದ್ದರು. ಸೇಲ್ಸ್ ಪರ್ಸನ್ಗೆ ಪ್ರತಿ ದಿನ 600 ರಿಂದ 700 ರೂಪಾಯಿ ಸಂಬಳ ನೀಡುತ್ತಿದ್ದರು.
In a major fire accident at least 10 lives including eight women workers, who were working in a private fireworks unit at Rengapalayam in Virudhunagar district were killed on October 17.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm