ಬ್ರೇಕಿಂಗ್ ನ್ಯೂಸ್
17-10-23 08:33 pm HK News Desk ದೇಶ - ವಿದೇಶ
ಶಿವಕಾಶಿ, ಅ.17: ಪಟಾಕಿ ತಯಾರಿಕೆಗೆ ಖ್ಯಾತಿಯಾಗಿರುವ ತಮಿಳುನಾಡಿನ ಶಿವಕಾಶಿಯ ಎರಡು ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಮತ್ತು ದೀಪಾವಳಿಯ ಸಂಭ್ರಮದ ಹೊತ್ತಲ್ಲೇ ದುರಂತ ಸಂಭವಿಸಿದೆ.
ವಿರುಧುನಗರ ಸಮೀಪದ ಶಿವಕಾಶಿಯಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ 9 ಮಂದಿ ಬೆಂಕಿಗೆ ಆಹುತಿಯಾದರು. ಘಟನೆಯ ಪ್ರದೇಶ ಸುತ್ತ ದೊಡ್ಡ ಸ್ಫೋಟಕ ಸದ್ದು ಕೇಳಿಬಂದಿತು. ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿದ ಕೆಲ ಕಾರ್ಮಿಕರು ಸುಟ್ಟ ಗಾಯಕ್ಕೀಡಾಗಿದ್ದಾರೆ. ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಇನ್ನೊಂದು ಸ್ಫೋಟವು ರೆಡ್ಡಿಪಟ್ಟಿ ಪ್ರದೇಶದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿತು. ಇಲ್ಲಿ ಓರ್ವ ಕಾರ್ಮಿಕ ಬೆಂಕಿಗೆ ಬಲಿಯಾಗಿದ್ದಾನೆ. ಹಲವು ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿರುವ ಬಾಲಾಜಿ ಟ್ರೇಡರ್ಸ್ನಲ್ಲಿ ಅಕ್ಟೋಬರ್ 7ರಂದು ನಡೆದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಬಾರ್ಡರ್ ಬಳಿ ಇರುವ ಶ್ರೀಬಾಲಾಜಿ ಟ್ರೇಡರ್ಸ್ ಮಾಲೀಕ ನವೀನ್ ರೆಡ್ಡಿ ಅನತಿ ಮೇರೆಗೆ ಸೇಲ್ಸ್ ಮ್ಯಾನ್ ಕೆಲಸಕ್ಕೆ ಬಂದಿದ್ದರು. ವಾಣಿಯಾಂಬಾಡಿಯಿಂದ 12 ಮಂದಿ, ಕಲ್ಲಕುರ್ಚಿಯಿಂದ 15 ಮಂದಿ ಜತೆಗೆ 9 ಮಂದಿ ಬಂದು ಕೆಲಸ ಮಾಡುತ್ತಿದ್ದರು. ಇವರೆಲ್ಲರು ಉಳಿದುಕೊಳ್ಳಲು ಪಟಾಕಿ ಅಂಗಡಿಯ ಮುಂಭಾಗವೇ ರೂಂವೊಂದನ್ನು ಮಾಡಿಕೊಟ್ಟಿದ್ದರು. ಸೇಲ್ಸ್ ಪರ್ಸನ್ಗೆ ಪ್ರತಿ ದಿನ 600 ರಿಂದ 700 ರೂಪಾಯಿ ಸಂಬಳ ನೀಡುತ್ತಿದ್ದರು.
In a major fire accident at least 10 lives including eight women workers, who were working in a private fireworks unit at Rengapalayam in Virudhunagar district were killed on October 17.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm