ಬ್ರೇಕಿಂಗ್ ನ್ಯೂಸ್
23-10-23 06:49 pm HK News Desk ದೇಶ - ವಿದೇಶ
ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್ನಲ್ಲಿ ಮೃತಪಟ್ಟಿದ್ದಾರೆ.
ವಾಘ್ ಬಕ್ರೀ ಟೀ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.
Ahmedabad-based Parag Desai (49) Executive Director of Wagh Bakri Tea Group, succumbed to head injuries he had sustained after he fell down while trying to escape an attack by street dogs during his morning walk near his residence in Ambali Road area in the heart of the city.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm