ಬ್ರೇಕಿಂಗ್ ನ್ಯೂಸ್
23-10-23 06:49 pm HK News Desk ದೇಶ - ವಿದೇಶ
ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್ನಲ್ಲಿ ಮೃತಪಟ್ಟಿದ್ದಾರೆ.
ವಾಘ್ ಬಕ್ರೀ ಟೀ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.
Ahmedabad-based Parag Desai (49) Executive Director of Wagh Bakri Tea Group, succumbed to head injuries he had sustained after he fell down while trying to escape an attack by street dogs during his morning walk near his residence in Ambali Road area in the heart of the city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm