ಬ್ರೇಕಿಂಗ್ ನ್ಯೂಸ್
26-10-23 11:01 pm HK News Desk ದೇಶ - ವಿದೇಶ
ನವದೆಹಲಿ, ಅ.26: ಭಾರತ ಮೂಲದ ಎಂಟು ಮಂದಿ ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಒಂದು ವರ್ಷದ ಹಿಂದೆ ಕತಾರ್ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಎಂಟು ಮಂದಿಯನ್ನ ನಿಗೂಢ ರೀತಿಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಲ್ಲಿದ್ದು ನಿವೃತ್ತಿಯಾಗಿದ್ದ ಎಂಟು ಮಂದಿ ಅಧಿಕಾರಿ ಹುದ್ದೆಗಳಲ್ಲಿದ್ದವರು ಕತಾರ್ ಸರಕಾರದ ಅಧೀನದಲ್ಲಿರುವ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿನ ನೌಕಾಪಡೆ ಸದಸ್ಯರಿಗೆ ತರಬೇತಿ ನೀಡುವುದು ಇವರ ಕೆಲಸವಾಗಿತ್ತು. ಹತ್ತು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದವರನ್ನು 2022ರ ಆಗಸ್ಟ್ ತಿಂಗಳಲ್ಲಿ ಕತಾರ್ ಅಧಿಕಾರಿಗಳು ಬಂಧಿಸಿದ್ದರು. ಅಧಿಕೃತವಾಗಿ ಯಾಕಾಗಿ ಬಂಧಿಸಿದ್ದಾರೆಂದು ಹೇಳಿಲ್ಲವಾದರೂ, ಅಲ್ಲಿನ ಮಾಧ್ಯಮ ವರದಿಗಳ ಪ್ರಕಾರ, ಇವರು ಇಸ್ರೇಲ್ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದರು ಎಂಬ ಆರೋಪ ಹೊರಿಸಲಾಗಿದೆ.
ಕ್ಯಾಪ್ಟನ್ ನವಜೀತ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಶಿಷ್ಟ, ಕಮಾಂಡರ್ ಪುನೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಳ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗಪಾಲ್ ಮತ್ತು ಸೈಲರ್ ರಾಘೇಶ್ ಶಿಕ್ಷೆಗೊಳಗಾದವರು. ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿರುವ ಬಗ್ಗೆ ಭಾರತದ ವಿದೇಶಾಂಗ ಇಲಾಖೆ ಆಘಾತ ವ್ಯಕ್ತಪಡಿಸಿದ್ದು, ಕೋರ್ಟ್ ತೀರ್ಪಿನ ಪ್ರತಿಯನ್ನು ಕಾಯುತ್ತಿದ್ದೇವೆ. ಕುಟುಂಬಸ್ಥರ ಜೊತೆಗೂ ಸಂಪರ್ಕದಲ್ಲಿದ್ದೇವೆ. ಕಾನೂನು ಪ್ರಕ್ರಿಯೆ ನಡೆಸುವುದಕ್ಕೆ ತಯಾರಿ ನಡೆಸಿದ್ದೇವೆ ಎಂದು ತಿಳಿಸಿದೆ. ಬಂಧನ ಆಗಿ ಒಂದು ವರ್ಷ ಕಳೆದರೂ ಕತಾರ್ ಸರಕಾರ, ಬಂಧನದ ಕಾರಣದ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ ಎನ್ನಲಾಗುತ್ತಿದೆ.
ಇದೇ ವೇಳೆ, ಕಾಂಗ್ರೆಸ್ ಕೂಡ ಭಾರತೀಯರಿಗೆ ಗಲ್ಲು ಶಿಕ್ಷೆ ವಿಧಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಟ್ವೀಟ್ ಮಾಡಿ, ವಿಶ್ವ ಗುರು ಮೋದಿ ಕೂಡಲೇ ತಮ್ಮ ಶಕ್ತಿ ಪ್ರದರ್ಶಿಸಬೇಕು. ಗಲ್ಲು ಶಿಕ್ಷೆಗೊಳಗಾದ ಭಾರತೀಯರನ್ನು ರಕ್ಷಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
A court in Qatar has handed down the death penalty to eight former Indian Navy personnel who have been detained in the country for over a year. The Indian government expressed shock over the sentencing and vowed to explore all available legal options to secure the release of its citizens.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm