ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm