ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm