ಬ್ರೇಕಿಂಗ್ ನ್ಯೂಸ್
28-10-23 05:26 pm HK News Desk ದೇಶ - ವಿದೇಶ
ನವದೆಹಲಿ, ಅ 28: ದೇಶದ ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಾಗುತ್ತಿದೆ ಎಂದು ಹೇಳುವ ಮೂಲಕ ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ದೇಶದಲ್ಲಿ ಮುಸ್ಲಿಮರು ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂಥ ಎಲ್ಲಾ ಅಪರಾಧಗಳಲ್ಲಿ ನಂಬರ್ 1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್ 1 ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯ ಕುರಿತಾಗಿ ಕೆಲವರಿಂದ ಭಾರೀ ಪ್ರಮಾಣದ ಟೀಕೆಗಳನ್ನು ಎದುರಿಸಿರುವ ಹೊರತಾಗಿಯೂ ಬದ್ರುದ್ದೀನ್ ಅಜ್ಮಲ್, ಮುಸ್ಲಿಮರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ತಮ್ಮ ಹೇಳಿಕೆಯ ಬಗ್ಗೆ ಅಚಲವಾಗಿ ನಿಂತಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾತನಾಡಿದ ಅವರು ನಾನು ಯಾವುದೇ ತಪ್ಪಾದ ಹೇಳಿಕೆಯನ್ನು ನೀಡಿಲ್ಲ. ಮುಸ್ಲಿಮರಲ್ಲಿ ಶಿಕ್ಷಣದ ಕೊರತಯೇ ನೇರವಾಗಿ ಇಂಥ ಅಪರಾಧ ಪ್ರಕರಣಗಳಲ್ಲಿ ನಮ್ಮವರ ಸಂಖ್ಯೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಸುಗಂಧ ದ್ರವ್ಯದ ಉದ್ದಿಮೆ ಹೊಂದಿರುವ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಎಐಯುಡಿಎಫ್, ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ನಡುವೆ ತನ್ನ ಅಧಿಕಾರವನ್ನು ಹೊಂದಿದೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎಐಯುಡಿಎಫ್ 15 ಶಾಸಕರನ್ನು ಹೊಂದಿದೆ.
ಮಹಿಳೆಯರನ್ನು, ಯುವತಿಯರನ್ನು ನೋಡಿದ ಬಳಿಕ ನಾವು ಲಂಗಿಕವಾಗಿ ಉತ್ಸುಕರಾಗುತ್ತೇವೆ ಎಂದು ಹೇಳುವ ಹುಡುಗರಿಗೆ ನಾನು ಒಂದೇ ಮಾತನ್ನು ಹೇಳಲು ಬಯಸುತ್ತೇನೆ. ಇಸ್ಲಾಂ ಧರ್ಮದಲ್ಲಿ ಸಾರ್ವಜನಿಕ ಸ್ಥಳಕ್ಕೆ ನಾವು ಹೋದಾಗ ಮಹಿಳೆಯರನ್ನು ಹಾಗೂ ಯುವತಿಯರನ್ನು ನೋಡಿದಾಗ ಸರಿಯಾದ ನಡವಳಿಕೆಯನ್ನು ಹೊಂದಿರಬೇಕು. ನಮ್ಮ ವರ್ತನೆ ಉತ್ತಮವಾಗಿರಬೇಕು. ನಿಮ್ಮ ಕುಟುಂಬದಲ್ಲಿಯೂ ಹೆಣ್ಣು ಮಕ್ಕಳಿದ್ದಾರೆ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮನೆಯಲ್ಲಿ ನಿಮ್ಮ ತಾಯಿ ಹಾಗೂ ತಂಗಿಯರು ಇದ್ದಾರೆ ಎಂದು ನೆನಪಾದಾಗ ನಿಮಗೆ ಯಾವುದೇ ಕೆಟ್ಟ ಯೋಚನೆಗಳು ಬರಲು ಸಾಧ್ಯವಿಲ್ಲ ಎಂದು ಅಜ್ಮಲ್ ಹೇಳಿದ್ದಾರೆ.
The Chief of All India United Democratic Front (AIUDF), Badruddin Ajmal, has landed in the middle of a controversy following his recent remark that crime rates are quite high among Muslims.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm