ಬ್ರೇಕಿಂಗ್ ನ್ಯೂಸ್
28-10-23 05:26 pm HK News Desk ದೇಶ - ವಿದೇಶ
ನವದೆಹಲಿ, ಅ 28: ದೇಶದ ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಾಗುತ್ತಿದೆ ಎಂದು ಹೇಳುವ ಮೂಲಕ ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ದೇಶದಲ್ಲಿ ಮುಸ್ಲಿಮರು ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂಥ ಎಲ್ಲಾ ಅಪರಾಧಗಳಲ್ಲಿ ನಂಬರ್ 1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್ 1 ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯ ಕುರಿತಾಗಿ ಕೆಲವರಿಂದ ಭಾರೀ ಪ್ರಮಾಣದ ಟೀಕೆಗಳನ್ನು ಎದುರಿಸಿರುವ ಹೊರತಾಗಿಯೂ ಬದ್ರುದ್ದೀನ್ ಅಜ್ಮಲ್, ಮುಸ್ಲಿಮರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ತಮ್ಮ ಹೇಳಿಕೆಯ ಬಗ್ಗೆ ಅಚಲವಾಗಿ ನಿಂತಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾತನಾಡಿದ ಅವರು ನಾನು ಯಾವುದೇ ತಪ್ಪಾದ ಹೇಳಿಕೆಯನ್ನು ನೀಡಿಲ್ಲ. ಮುಸ್ಲಿಮರಲ್ಲಿ ಶಿಕ್ಷಣದ ಕೊರತಯೇ ನೇರವಾಗಿ ಇಂಥ ಅಪರಾಧ ಪ್ರಕರಣಗಳಲ್ಲಿ ನಮ್ಮವರ ಸಂಖ್ಯೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಸುಗಂಧ ದ್ರವ್ಯದ ಉದ್ದಿಮೆ ಹೊಂದಿರುವ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಎಐಯುಡಿಎಫ್, ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ನಡುವೆ ತನ್ನ ಅಧಿಕಾರವನ್ನು ಹೊಂದಿದೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎಐಯುಡಿಎಫ್ 15 ಶಾಸಕರನ್ನು ಹೊಂದಿದೆ.
ಮಹಿಳೆಯರನ್ನು, ಯುವತಿಯರನ್ನು ನೋಡಿದ ಬಳಿಕ ನಾವು ಲಂಗಿಕವಾಗಿ ಉತ್ಸುಕರಾಗುತ್ತೇವೆ ಎಂದು ಹೇಳುವ ಹುಡುಗರಿಗೆ ನಾನು ಒಂದೇ ಮಾತನ್ನು ಹೇಳಲು ಬಯಸುತ್ತೇನೆ. ಇಸ್ಲಾಂ ಧರ್ಮದಲ್ಲಿ ಸಾರ್ವಜನಿಕ ಸ್ಥಳಕ್ಕೆ ನಾವು ಹೋದಾಗ ಮಹಿಳೆಯರನ್ನು ಹಾಗೂ ಯುವತಿಯರನ್ನು ನೋಡಿದಾಗ ಸರಿಯಾದ ನಡವಳಿಕೆಯನ್ನು ಹೊಂದಿರಬೇಕು. ನಮ್ಮ ವರ್ತನೆ ಉತ್ತಮವಾಗಿರಬೇಕು. ನಿಮ್ಮ ಕುಟುಂಬದಲ್ಲಿಯೂ ಹೆಣ್ಣು ಮಕ್ಕಳಿದ್ದಾರೆ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮನೆಯಲ್ಲಿ ನಿಮ್ಮ ತಾಯಿ ಹಾಗೂ ತಂಗಿಯರು ಇದ್ದಾರೆ ಎಂದು ನೆನಪಾದಾಗ ನಿಮಗೆ ಯಾವುದೇ ಕೆಟ್ಟ ಯೋಚನೆಗಳು ಬರಲು ಸಾಧ್ಯವಿಲ್ಲ ಎಂದು ಅಜ್ಮಲ್ ಹೇಳಿದ್ದಾರೆ.
The Chief of All India United Democratic Front (AIUDF), Badruddin Ajmal, has landed in the middle of a controversy following his recent remark that crime rates are quite high among Muslims.
20-05-25 07:18 pm
HK News Desk
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
Shashi Kumar IPS, Corruption, Hubballi, polic...
19-05-25 04:00 pm
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 06:59 pm
Mangalore Correspondent
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm