ಬ್ರೇಕಿಂಗ್ ನ್ಯೂಸ್
29-10-23 06:51 pm HK News Desk ದೇಶ - ವಿದೇಶ
Photo credits : Onmanorama News
ತಿರುವನಂತಪುರ, ಅ.29: ಎರ್ನಾಕುಲಂ ಜಿಲ್ಲೆಯ ಕಳಮಶ್ಶೇರಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿಯಲ್ಲಿ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದು ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದಾನೆ. ತೃಶ್ಶೂರು ಜಿಲ್ಲೆಯ ಕೊಡಕ್ಕರ ಪೊಲೀಸ್ ಠಾಣೆಯಲ್ಲಿ ಡೊಮಿನಿಕ್ ಮಾರ್ಟಿನ್ ಎಂಬಾತ ಪೊಲೀಸರಿಗೆ ಶರಣಾಗಿದ್ದು ತನ್ನದೇ ಕೃತ್ಯವೆಂದು ಹೇಳಿಕೊಂಡಿದ್ದಾನೆ.
ಪೊಲೀಸರು ಆತನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಡೊಮಿನಿಕ್ ಮಾರ್ಟಿನ್ ತಾನು ಕೂಡ ಜೆಹೋವಾ ವಿಟ್ನೆಸ್ ಪಂಗಡಕ್ಕೆ ಸೇರಿದವನು ಎಂದು ತಿಳಿಸಿದ್ದಾನೆ. ನಾವು ಎಲ್ಲ ಕೋನದಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಜಿತ್ ಕುಮಾರ್ ತಿಳಿಸಿದ್ದಾರೆ.
ಕಳಮಶ್ಶೇರಿಯಲ್ಲಿ ಜೆಹೋವಾ ವಿಟ್ನೆಸ್ ಕ್ರಿಸ್ತಿಯನ್ ವರ್ಗದ ಮೂರು ದಿನದ ಸಮ್ಮೇಳನ ನಡೆಯುತ್ತಿದ್ದಾಗ, ಇಂದು ಬೆಳಗ್ಗೆ ಹಾಲ್ ಒಳಗಡೆ ಎರಡು ಕಡೆ ಬಾಂಬ್ ಸ್ಫೋಟ ಆಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ, ಐಇಡಿ ಬಾಂಬ್ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದೆ. ಸ್ಥಳದಲ್ಲಿ ಕೇರಳ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಒಬ್ಬ ಮಹಿಳೆ ಸಾವು ಕಂಡಿದ್ದು, 52 ಮಂದಿ ಗಾಯಗೊಂಡಿದ್ದಾರೆ. ಆರು ಮತ್ತು 12 ವರ್ಷದ ಇಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದು ಐಸಿಯುನಲ್ಲಿದ್ದಾರೆ.
ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಲರ್ಟ್ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆಗೆ ಮಾತನಾಡಿದ್ದು, ಎನ್ಐಎ ಮತ್ತು ಎನ್ಎಸ್ ಜಿ ಕಮಾಂಡೋ ಪಡೆಯನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದಾಗಿ ತಿಳಿಸಿದ್ದಾರೆ. ಇದೇ ವೇಳೆ, ಸ್ಫೋಟ ಘಟನೆ ಸಂಬಂಧಿಸಿ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಕಣ್ಣೂರು ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Church blast in Kochi kerala, Dominic Martin confesses crime of planting IED bomb in Jehova's Witness centre. Kerala police on Sunday confirmed that Thammanam native Dominic Martin planted the bomb which went off at a convention centre in Kalamassery in the morning. Police found visuals of the remote control used to detonate the IED on Dominic's phone.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm