ಬ್ರೇಕಿಂಗ್ ನ್ಯೂಸ್
30-10-23 12:02 pm HK News Desk ದೇಶ - ವಿದೇಶ
ಕೊಚ್ಚಿ, ಅ 30: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಹಲವು ಮಂದಿ ಗಂಭೀರ ಗಾಯಗೊಂಡು ಕೇರಳದ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.


ಘಟನೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಎಫ್ಐಆರ್ ಕೂಡ ದಾಖಲಾಗಿದೆ.
ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಕಲಮಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಬೆಳಿಗ್ಗೆ 9.40ಕ್ಕೆ ಈ ಸ್ಫೋಟ ನಡೆದಿದೆ. ಮೂರು ದಿನಗಳ ಸಮಾವೇಶದ ಕೊನೆಯ ದಿನವಾದ ಭಾನುವಾರ ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಸಭಾ ಭವನದ ಒಳಗೆ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆ ನಡೆದ ಕೆಲವು ತಾಸುಗಳ ಬಳಿಕ, ಯಹೋವನ ಸಾಕ್ಷಿಗಳು ಪಂಥದ ಸದಸ್ಯನೆಂದು ಹೇಳಿಕೊಂಡ 48 ವರ್ಷ ವಯಸ್ಸಿನ ಡಾಮಿನಿಕ್ ಮಾರ್ಟಿನ್ ಎಂಬಾತ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ‘ಸ್ಫೋಟಕ್ಕೆ ನಾನೇ ಕಾರಣ’ ಎಂದು ಹೇಳಿಕೊಂಡಿದ್ದಾನೆ ಎಂದು ಕೇರಳದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ಸ್ಫೋಟದ ನಂತರದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.
One person died and over 20 injured after multiple explosions took place at a prayer meeting of Jehovah's Witnesses in the Kalamassery area of Kerala's Kochi on Sunday morning, police said. State Industries Minister P Rajeev said the blast site is cordoned off and police and fire rescue have been pressed into service.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm