ಬ್ರೇಕಿಂಗ್ ನ್ಯೂಸ್
02-11-23 01:09 pm HK News Desk ದೇಶ - ವಿದೇಶ
ನವದೆಹಲಿ, ನ.2: ಇಸ್ರೇಲ್ ದೇಶಕ್ಕೆ ತೈಲ, ಆಹಾರ ಸೇರಿದಂತೆ ಯಾವುದೇ ಸಾಮಗ್ರಿಗಳನ್ನು ನೀಡಬೇಡಿ. ಆ ದೇಶಕ್ಕೆ ರಫ್ತು ಮಾಡುವುದನ್ನೇ ನಿಲ್ಲಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ದೇಶದ ಮುಸ್ಲಿಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಅಲ್ಲದೆ, ಗಾಜಾ ಪಟ್ಟಿ ಮೇಲೆ ಇಸ್ರೇಲ್ ವಾಯುಪಡೆ ನಡೆಸುತ್ತಿರುವ ಬಾಂಬ್ ದಾಳಿ ನಿಲ್ಲಿಸಲು ಒತ್ತಾಯಿಸಬೇಕು ಎಂದಿದ್ದಾರೆ.
ಇಸ್ರೇಲ್ ದೇಶವು ಪ್ಯಾಲೆಸ್ತೀನ್ ಭಾಗವಾಗಿರುವ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿದೆ. ಇದು ಈ ಕೂಡಲೇ ನಿಲ್ಲಬೇಕು. ಯಹೂದಿ ರಾಷ್ಟ್ರಕ್ಕೆ ಮುಸ್ಲಿಂ ದೇಶಗಳಿಂದ ರಫ್ತಾಗುತ್ತಿರುವ ತೈಲ ಉತ್ಪನ್ನಗಳು ಹಾಗೂ ಆಹಾರ ಉತ್ಪನ್ನಗಳ ಸರಬರಾಜು ನಿಲ್ಲಬೇಕು ಎಂದು ಅಯತೊಲ್ಲಾ ಅಲಿ ಖಮೇನಿ ಆಗ್ರಹಿಸಿದ್ದಾರೆ. ಇರಾನ್ನ ಸರ್ಕಾರಿ ಮಾಧ್ಯಮದಲ್ಲಿ ಖಮೇನಿ ಭಾಷಣ ಪ್ರಸಾರವಾಗಿದೆ. ಈ ಭಾಷಣದಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಿಶ್ವದೆಲ್ಲೆಡೆಯ ಇಸ್ಲಾಂ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಗಾಜಾ ಪಟ್ಟಿಯಲ್ಲಿ ಇರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡಬೇಕು ಎಂದು ಇಸ್ರೇಲ್ ಶಪಥ ಮಾಡಿದ್ದು ನಿರಂತರ ದಾಳಿ ನಡೆಸುತ್ತಿದೆ. ಇರಾನ್ ಬೆಂಬಲಿತ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಒಮ್ಮೆಲೇ ದಾಳಿ ನಡೆಸಿದ್ದರು. ಜಲ, ನೆಲ, ವಾಯು ಮಾರ್ಗದಲ್ಲಿ ಇಸ್ರೇಲ್ಗೆ ಲಗ್ಗೆ ಇಟ್ಟಿದ್ದ ಉಗ್ರರು, 1,400ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳನ್ನು ಕೊಂದು ಹಾಕಿದ್ದರು. ಅಷ್ಟೇ ಅಲ್ಲ, 200ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಹಾಗೂ ವಿದೇಶೀಯರನ್ನು ಒತ್ತೆಯಾಳನ್ನಾಗಿಸಿ ಗಾಜಾ ಪಟ್ಟಿಗೆ ಕರೆದೊಯ್ದಿದ್ದು ಸುರಂಗದಲ್ಲಿ ಅಡಗಿಸಿಟ್ಟಿದ್ದಾರೆ. ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಈವರೆಗೆ 8 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಕಡೆಯವರು ಹೇಳುತ್ತಿದ್ದಾರೆ
Iran's supreme leader Ayatollah Ali Khamenei urged Muslim countries Wednesday to halt trade with Israel, including oil exports, in response to its bombardment of Gaza since deadly Hamas attacks
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm