ಬ್ರೇಕಿಂಗ್ ನ್ಯೂಸ್
02-11-23 01:09 pm HK News Desk ದೇಶ - ವಿದೇಶ
ನವದೆಹಲಿ, ನ.2: ಇಸ್ರೇಲ್ ದೇಶಕ್ಕೆ ತೈಲ, ಆಹಾರ ಸೇರಿದಂತೆ ಯಾವುದೇ ಸಾಮಗ್ರಿಗಳನ್ನು ನೀಡಬೇಡಿ. ಆ ದೇಶಕ್ಕೆ ರಫ್ತು ಮಾಡುವುದನ್ನೇ ನಿಲ್ಲಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ದೇಶದ ಮುಸ್ಲಿಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಅಲ್ಲದೆ, ಗಾಜಾ ಪಟ್ಟಿ ಮೇಲೆ ಇಸ್ರೇಲ್ ವಾಯುಪಡೆ ನಡೆಸುತ್ತಿರುವ ಬಾಂಬ್ ದಾಳಿ ನಿಲ್ಲಿಸಲು ಒತ್ತಾಯಿಸಬೇಕು ಎಂದಿದ್ದಾರೆ.
ಇಸ್ರೇಲ್ ದೇಶವು ಪ್ಯಾಲೆಸ್ತೀನ್ ಭಾಗವಾಗಿರುವ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿದೆ. ಇದು ಈ ಕೂಡಲೇ ನಿಲ್ಲಬೇಕು. ಯಹೂದಿ ರಾಷ್ಟ್ರಕ್ಕೆ ಮುಸ್ಲಿಂ ದೇಶಗಳಿಂದ ರಫ್ತಾಗುತ್ತಿರುವ ತೈಲ ಉತ್ಪನ್ನಗಳು ಹಾಗೂ ಆಹಾರ ಉತ್ಪನ್ನಗಳ ಸರಬರಾಜು ನಿಲ್ಲಬೇಕು ಎಂದು ಅಯತೊಲ್ಲಾ ಅಲಿ ಖಮೇನಿ ಆಗ್ರಹಿಸಿದ್ದಾರೆ. ಇರಾನ್ನ ಸರ್ಕಾರಿ ಮಾಧ್ಯಮದಲ್ಲಿ ಖಮೇನಿ ಭಾಷಣ ಪ್ರಸಾರವಾಗಿದೆ. ಈ ಭಾಷಣದಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಿಶ್ವದೆಲ್ಲೆಡೆಯ ಇಸ್ಲಾಂ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಗಾಜಾ ಪಟ್ಟಿಯಲ್ಲಿ ಇರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡಬೇಕು ಎಂದು ಇಸ್ರೇಲ್ ಶಪಥ ಮಾಡಿದ್ದು ನಿರಂತರ ದಾಳಿ ನಡೆಸುತ್ತಿದೆ. ಇರಾನ್ ಬೆಂಬಲಿತ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಒಮ್ಮೆಲೇ ದಾಳಿ ನಡೆಸಿದ್ದರು. ಜಲ, ನೆಲ, ವಾಯು ಮಾರ್ಗದಲ್ಲಿ ಇಸ್ರೇಲ್ಗೆ ಲಗ್ಗೆ ಇಟ್ಟಿದ್ದ ಉಗ್ರರು, 1,400ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳನ್ನು ಕೊಂದು ಹಾಕಿದ್ದರು. ಅಷ್ಟೇ ಅಲ್ಲ, 200ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಹಾಗೂ ವಿದೇಶೀಯರನ್ನು ಒತ್ತೆಯಾಳನ್ನಾಗಿಸಿ ಗಾಜಾ ಪಟ್ಟಿಗೆ ಕರೆದೊಯ್ದಿದ್ದು ಸುರಂಗದಲ್ಲಿ ಅಡಗಿಸಿಟ್ಟಿದ್ದಾರೆ. ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಈವರೆಗೆ 8 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಕಡೆಯವರು ಹೇಳುತ್ತಿದ್ದಾರೆ
Iran's supreme leader Ayatollah Ali Khamenei urged Muslim countries Wednesday to halt trade with Israel, including oil exports, in response to its bombardment of Gaza since deadly Hamas attacks
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm