ಬ್ರೇಕಿಂಗ್ ನ್ಯೂಸ್
02-11-23 03:01 pm HK News Desk ದೇಶ - ವಿದೇಶ
ರಾಜಸ್ಥಾನ್, ನ.2: ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಹಮಾಸ್ ಯುದ್ಧದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಅಲ್ವಾರ್ ನಲ್ಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಗಾಜಾದಲ್ಲಿ ತಾಲಿಬಾನಿ ಮನಸ್ಥಿತಿಯ ಜನರನ್ನು ಹೇಗೆ ಕೊನೆಗಾಣಿಸಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ಅವರ ಅಡಗುತಾಣಗಳನ್ನು ಕರಾರುವಕ್ಕಾಗಿ ಹುಡುಕಿ ನಾಶಮಾಡಲಾಗುತ್ತಿದೆ. ಅದೇ ರೀತಿ ತಾಲಿಬಾನಿಗಳನ್ನು ಮಟ್ಟಹಾಕಲು ಹನುಮಂತನ ಗದೆಯೇ ಪರಿಹಾರವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಯೋಗಿ, ಗೂಂಡಾಗಿರಿ, ಅರಾಜಕತೆ ಮತ್ತು ಭಯೋತ್ಪಾದನೆ ಸಮಾಜಕ್ಕೆ ದೊಡ್ಡ ಶಾಪವಾಗಿದೆ. ಇದರೊಳಗೆ ರಾಜಕೀಯ ಬೆರೆತುಕೊಂಡಾಗ ಇದರಿಂದ ನಾಗರಿಕ ಸಮಾಜದ ಮೇಲೆ ದುಷ್ಪರಿಣಾಮ ಬೀರಲು ಕಾರಣವಾಗುತ್ತದೆ ಎಂದು ಹೇಳಿದರು.
ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್ ನಾಯಕ ಜವಾಹರಲಾಲ್ ನೆಹರು ಅವರು ಇಲ್ಲಿಯೂ ಸಮಸ್ಯೆಗಳನ್ನು ಸೃಷ್ಟಿಸಿದರು. ಇದರಿಂದಾಗಿ ಭಯೋತ್ಪಾದನೆ ಹರಡಿತು. ಬಳಿಕ ಬಿಜೆಪಿ ಸರ್ಕಾರ ಬಂದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಾಶ್ಮೀರವನ್ನು ಸಮಸ್ಯೆಯಿಂದ ಮುಕ್ತಗೊಳಿಸಿದರು. ಅಲ್ಲಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಯೋಗಿ ನುಡಿದರು
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ:
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗುತ್ತಿರುವುದಾಗಿ ಆರೋಪಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮನಸ್ಥಿತಿಯಿಂದಾಗಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೊಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ
Uttar Pradesh chief minister Yogi Adityanath on Wednesday took a dig at the Congress party while drawing parallels between the Israel-Hamas war and Taliban and the Congress vs BJP fight in Rajasthan ahead of the assembly elections saying that the only solution to the Taliban is Lord Hanuman’s mace.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm