ಬ್ರೇಕಿಂಗ್ ನ್ಯೂಸ್
04-11-23 04:20 pm HK News Desk ದೇಶ - ವಿದೇಶ
ಕಠ್ಮಂಡು, ನ.04: ನೇಪಾಳದಲ್ಲಿ ತಡರಾತ್ರಿ ಭೂಮಿ ಕಂಪಿಸಿದ ಕಾರಣ ವಿನಾಶ ಸಂಭವಿಸಿದೆ. ನೇಪಾಳದಲ್ಲಿ ಶುಕ್ರವಾರ ರಾತ್ರಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಶುಕ್ರವಾರ ಮಧ್ಯರಾತ್ರಿಯ ಮೊದಲು ವಾಯುವ್ಯ ನೇಪಾಳದ ಜಿಲ್ಲೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 129 ಜನರು ಸಾವನ್ನಪ್ಪಿದ್ದಾರೆ ಮತ್ತು 500 ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುದ್ದಿ ಸಂಸ್ಥೆ ANI ಪ್ರಕಾರ, ಶುಕ್ರವಾರ ರಾತ್ರಿ 11:47 ಕ್ಕೆ ಜಜರ್ಕೋಟ್ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಬಗ್ಗೆ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಎಲ್ಲಾ 3 ಭದ್ರತಾ ಏಜೆನ್ಸಿಗಳನ್ನು ಕೇಳಲಾಗಿದೆ ಎಂದು ನೇಪಾಳ ಪಿಎಂಒ ಟ್ವೀಟ್ ಮಾಡಿದ್ದಾರೆ.


ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಭೂಕಂಪವು ಅತೀ ಹೆಚ್ಚು ವಿನಾಶವನ್ನು ಉಂಟುಮಾಡಿದೆ. ಹತ್ತಾರು ಜನರು ಇನ್ನೂ ಇಲ್ಲಿ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ, ಅವರನ್ನು ಉಳಿಸುವ ಪ್ರಯತ್ನಗಳು ನಡೆಯುತ್ತಿವೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಭಾರತ-ನೇಪಾಳ ಗಡಿಯಿಂದ ಸುಮಾರು 98 ಕಿಲೋಮೀಟರ್ ದೂರದಲ್ಲಿರುವ ಕೇಂದ್ರ ಬಿಂದುವಾಗಿರುವ ಜಾಜರ್ಕೋಟ್ನಲ್ಲಿ ಭೂಕಂಪದಿಂದಾಗಿ ಇದುವರೆಗೆ 128 ಜನರು ಸಾವನ್ನಪ್ಪಿದ್ದಾರೆ ಮತ್ತು 140 ಜನರು ಗಾಯಗೊಂಡಿದ್ದಾರೆ. ನೇಪಾಳ ಪೊಲೀಸರ ಕೇಂದ್ರ ವಕ್ತಾರ ಡಿಐಜಿ ಕುವೆರ್ ಕಡಯತ್ ಈ ಮಾಹಿತಿ ನೀಡಿದ್ದಾರೆ.

ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಭೂಮಿ ಕಂಪಿಸಿದೆ. ಆತಂಕಗೊಂಡ ಜನ ಮನೆಯಿಂದ ಆಚೆ ಬಂದು ರಾತ್ರಿಯೆಲ್ಲಾ ರೋಡಲ್ಲೇ ಜಾಗರಣ ಮಾಡಿದ್ದಾರೆ.
More than 150 people have been killed after an earthquake struck remote western Nepal on Friday. Security forces have been deployed to help rescue efforts in the rugged districts of Jajarkot and West Rukum, 500km (310 miles) west of Kathmandu. Strong tremors were felt far away in the Nepalese capital and in cities in neighbouring India, including Delhi.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm