ಬ್ರೇಕಿಂಗ್ ನ್ಯೂಸ್
05-11-23 10:33 pm HK News Desk ದೇಶ - ವಿದೇಶ
ಇಂದೋರ್, ನ.5: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಸ್ಥಿತಿ ಹಾಳಾಗಿದ್ದು, ಅಲ್ಲಿನ ರಾಜಕೀಯ ಚಟುವಟಿಕೆ ನೋಡಿದರೆ ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಗೊತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಟಕಿಯಾಡಿದ್ದಾರೆ. ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಪ್ರದೇಶದ ಖಾಂಡ್ವ ಜಿಲ್ಲೆಯಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬಗ್ಗೆಯೇ ಗೊಂದಲ ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ರಾಜ್ಯದ ಆರ್ಥಿಕತೆಗೆ ಹಾನಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕರ್ನಾಟಕದಲ್ಲಿ ಆರು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಆಡಳಿತದತ್ತ ನೋಡಿ, ಅಲ್ಲಿನ ಮುಖ್ಯಮಂತ್ರಿಗೆ ತಾನು ಎಷ್ಟು ದಿನ ರಾಜ್ಯಭಾರ ನಡೆಸುತ್ತೇನೆ ಎಂಬ ಬಗ್ಗೆಯೇ ಗೊತ್ತಿಲ್ಲ. ಅವರಿಂದ ಕರ್ನಾಟಕದ ಬೆಳವಣಿಗೆ ಹೇಗೆ ಸಾಧ್ಯ. ಇದರಿಂದ ಅಭಿವೃದ್ಧಿ ಕುಂಠಿತಗೊಂಡು ರಾಜ್ಯದ ಸ್ಥಿತಿ ಹಾಳಾಗುತ್ತದೆ ಎಂದಿದ್ದಾರೆ.

ರಾಜಸ್ಥಾನದ ಹಾಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ ನಡುವಿನ ಸಂಘರ್ಷವನ್ನು ಪ್ರಸ್ತಾಪಿಸಿದ ಮೋದಿ, ಅಲ್ಲಿಯೂ ಎರಡು ಗುಂಪುಗಳ ನಡುವೆ ಒಳಜಗಳ ಇದೆ. ಈ ರೀತಿಯ ಜಗಳ ಕಾಂಗ್ರೆಸ್ ಸಂಸ್ಕೃತಿ. ದೆಹಲಿಯಲ್ಲಿ ಕುಳಿತುಕೊಂಡಿರುವ ಅವರ ನ್ಯಾಯಾಧೀಶರು ತೀರ್ಪು ಕೊಡುತ್ತಾರೆ ಮತ್ತು ಅಂಗಡಿ ನಡೆಸುತ್ತಾರೆ ಎಂದು ಟೀಕಿಸಿದರು.
ಎಲ್ಲೆಲ್ಲ ಕಾಂಗ್ರೆಸ್ ಅದೃಷ್ಟವಶಾತ್ ಅಧಿಕಾರ ಹಿಡಿದಿದೆಯೋ ಅಲ್ಲೆಲ್ಲ ಅದರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮಧ್ಯೆ ಲೂಟಿ ಮಾಡಲು ಪೈಪೋಟಿ ನಡೆದಿದೆ. ಅಂಥ ಸುದ್ದಿ ಕರ್ನಾಟಕದಿಂದ ಪದೇ ಪದೇ ಕೇಳಿಬರುತ್ತಿದೆ ಎಂದೂ ಮೋದಿ ಹೇಳಿದರು.
Prime Minister Narendra Modi on Sunday said the Congress has damaged Karnataka where development has come to a standstill and raised doubts about the continuation of its chief minister at the helm.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm