ಬ್ರೇಕಿಂಗ್ ನ್ಯೂಸ್
06-11-23 01:44 pm HK News Desk ದೇಶ - ವಿದೇಶ
ನವದೆಹಲಿ, ನ.5: ಬಾಲಿವುಡ್ ನಟ- ನಟಿಯರನ್ನು ವಿವಾದಕ್ಕೆ ಸಿಲುಕಿಸಿರುವ ಮಹಾದೇವ ಬೆಟ್ಟಿಂಗ್ ಆ್ಯಪ್ ಅನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮಹದೇವ್ ಬುಕ್ಕಿಂಗ್ ಆನ್ಲೈನ್ ಸೇರಿದಂತೆ ಇತರೇ 21 ಬೆಟ್ಟಿಂಗ್ ಅಪ್ಲಿಕೇಶನ್ಗಳು ಮತ್ತು ವೆಬ್ಸೈಟ್ಗಳ ವಿರುದ್ಧ ಐಟಿ ಸಚಿವಾಲಯ ಭಾನುವಾರ ನಿರ್ಬಂಧ ಹೇರಿದೆ. ಇಡಿ ಶಿಫಾರಸಿನ ನಂತರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ.
ಈ ಕುರಿತಾಗಿ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿಕೆ ನೀಡಿದ್ದು, “ಸೆಕ್ಷನ್ 69 ಎ ಐಟಿ ಕಾಯಿದೆ ಅಡಿಯಲ್ಲಿ ವೆಬ್ಸೈಟ್, ಆ್ಯಪ್ ಅನ್ನು ನಿಷೇಧಿಸುವ ಎಲ್ಲಾ ಅಧಿಕಾರವನ್ನು ಛತ್ತೀಸ್ಗಢ ಸರ್ಕಾರ ಹೊಂದಿದೆ. ಆದರೆ, ಅವರು ಹಾಗೆ ಮಾಡಿಲ್ಲ. ಕಳೆದ 1.5 ವರ್ಷಗಳಿಂದ ತನಿಖೆ ನಡೆಯುತ್ತಿದ್ದು, ರಾಜ್ಯ ಸರ್ಕಾರದಿಂದ ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ. ವಾಸ್ತವವಾಗಿ, ಇಡಿಯಿಂದ ಮೊದಲ ಮತ್ತು ಏಕೈಕ ಮನವಿ ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕರನ್ನು ಆಗಸ್ಟ್ನಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ 19 ರ ಅಡಿಯಲ್ಲಿ ಬಂಧಿಸಲಾಗಿತ್ತು. ಕಳೆದ ವಾರ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್ಗಢ ಸಿಎಂ ಭೂಪೇಶ್ ಬಾಘೇಲ್ಗೆ ಸುಮಾರು 508 ಕೋಟಿ ರೂ. ಲಂಚ ನೀಡಿದ್ದಾರೆ ಎಂಬ ಕುರಿತು ಫೋರೆನ್ಸಿಕ್ ವಿಶ್ಲೇಷಣೆ ಮತ್ತು ‘ಕ್ಯಾಶ್ ಕೊರಿಯರ್’ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ ಹೇಳಿಕೊಂಡಿತ್ತು. ಗಮನಾರ್ಹ ಮೊತ್ತದ ನಗದನ್ನು ತಲುಪಿಸುವ ಉದ್ದೇಶದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಪಾರ್ಸೆಲ್ ಕಳುಹಿಸಲಾಗಿತ್ತು ಎಂದು ಬಂಧಿತ ಅಸಿಂ ದಾಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ರಾಜ್ಯದಲ್ಲಿ ಮುಂಬರುವ ಚುನಾವಣಾ ವೆಚ್ಚವನ್ನು ಬೆಂಬಲಿಸಲು ‘ಬಘೇಲ್’ ಎಂದು ಕರೆಯಲ್ಪಡುವ ಪ್ರಮುಖ ರಾಜಕಾರಣಿಗೆ ತಲುಪಿಸುವ ಉದ್ದೇಶದಿಂದ ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ನ ಪ್ರವರ್ತಕರು ಹಣವನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು ಒಪ್ಪಿಕೊಂಡಿದ್ದ. ಇದಲ್ಲದೆ, ಕೊರಿಯರ್ ಏಜಂಟ್ ಅಸೀಮ್ ದಾಸ್ ಜೊತೆಗೆ ಪೊಲೀಸ್ ಕಾನ್ಸ್ ಟೇಬಲ್ ಭೀಮ್ ಸಿಂಗ್ ಯಾದವ್ ಎಂಬಾತನನ್ನು ಕಳೆದ ವಾರ ಇಡಿ ಅಧಿಕಾರಿಗಳು ಬಂಧಿಸಿದ್ದರು.
The government on Sunday issued orders to ban 22 illegal betting and gambling apps and websites, including the controversial app Mahadev Book Online, an official notification said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm