ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm