ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.
ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm