ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm