ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm