ಬ್ರೇಕಿಂಗ್ ನ್ಯೂಸ್
11-11-23 01:13 pm HK News Desk ದೇಶ - ವಿದೇಶ
ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ
ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.



ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :
ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm