ಬ್ರೇಕಿಂಗ್ ನ್ಯೂಸ್
11-11-23 01:13 pm HK News Desk ದೇಶ - ವಿದೇಶ
ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ
ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.



ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :
ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm