ಬ್ರೇಕಿಂಗ್ ನ್ಯೂಸ್
12-11-23 04:33 pm HK News Desk ದೇಶ - ವಿದೇಶ
ಡೆಹ್ರಾಡೂನ್, ನ.12: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ಶನಿವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 36 ಕಾರ್ಮಿಕರು ಅದರೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್) ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಾಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.



ಘಟನೆಯ ಬಗ್ಗೆ ತಿಳಿದಾಗಿನಿಂದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಸ್ಥಳದಲ್ಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿ ಮರಳಲಿ ಎಂದು ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಅವಶೇಷಗಳನ್ನು ಕತ್ತರಿಸಲು ಡ್ರಿಲ್ಲಿಂಗ್ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಆಮ್ಲಜನಕ ಪೈಪ್ ಗಳನ್ನು ಒಳಗೆ ಕಳುಹಿಸಲಾಗಿದೆ. ಅಧಿಕಾರಿಗಳ ಪ್ರಸ್ತುತ ಅಂದಾಜಿನ ಪ್ರಕಾರ, ಕಾರ್ಮಿಕರನ್ನು ಸ್ಥಳಾಂತರಿಸಲು 2-3 ದಿನಗಳು ಬೇಕಾಗಬಹುದು.
ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಮಾತನಾಡಿ, ಸುರಂಗ ಪ್ರಾರಂಭದ ಸ್ಥಳದಿಂದ ಸುಮಾರು 200 ಮೀಟರ್ ಮುಂದೆ ಒಡೆದಿದೆ.
ಎಸ್ ಡಿಆರ್ಎಫ್ ನ ಕಮಾಂಡರ್ ಮಣಿಕಾಂತ್ ಮಿಶ್ರಾ ಅವರು ತಮ್ಮ ಸಿಬ್ಬಂದಿ ಇತರ ರಕ್ಷಣಾ ಘಟಕಗಳೊಂದಿಗೆ ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
At least 36 workers are feared to be trapped inside a tunnel in Uttarakhand's Uttarkashi district after the under-construction structure collapsed on Saturday night.The National and State Disaster Response Fund (NDRF & SDRF) teams and police personnel have been rushed to the spot, and rescue operations are currently underway in the tunnel connecting Silkyara to Dandalgaon on the Brahmakhal-Yamunotri National Highway.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm