ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm