ಬ್ರೇಕಿಂಗ್ ನ್ಯೂಸ್
20-11-23 11:47 am HK News Desk ದೇಶ - ವಿದೇಶ
ಆಂಧ್ರಪ್ರದೇಶ, ನ 20: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ,
ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.


ಈ ನಡುವೆ ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅವಘಡದ ವೇಳೆ ಬೋಟ್ ಗಳಲ್ಲಿ ಮಲಗಿದ್ದವರು ಬೆಂಕಿಗೆ ಆಹುತಿಯಾಗಿರಬಹುದು ಎಂದು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಅಪರಿಚಿತರು ಉದ್ದೇಶಪೂರ್ವಕವಾಗಿ ದೋಣಿಗೆ ಬೆಂಕಿ ಹಚ್ಚಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ಘಟನೆಯಿಂದ ಲಕ್ಷಗಟ್ಟಲೆ ಆಸ್ತಿ ನಷ್ಟವಾಗಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 25 ರಿಂದ 30 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆಯಂತೆ. ಅವಘಡದ ವೇಳೆ ಕೆಲವು ಬೋಟ್ ಗಳು ಆಗ ತಾನೇ ಮೀನುಗಾರಿಕೆ ಮುಗಿಸಿ ಮೀನುಗಾರಿಕಾ ಬಂದರಿಗೆ ಬಂದಿದ್ದವು. ಕೆಲವು ಬೋಟ್ ಗಳು ಇಂಧನ ತುಂಬಿಸಿಕೊಂಡು ಮಿಣಿಗಾರಿಕೆಗೆ ತೆರಳಲು ಸಿದ್ಧತೆ ನಡೆಸಿದ್ದವು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಮತ್ಸ್ಯ ಸಂಪತ್ತೆಲ್ಲ ಸುಟ್ಟು ಬೂದಿಯಾಗಿ ಮಾರ್ಪಟ್ಟಿದೆ.
A massive fire broke out at Andhra Pradesh's Visakhapatnam fishing harbour and gutted around 35 fishing boats on Sunday night. Deputy Commissioner of Police Anand Reddy said the fire first broke out on a boat and then spread to nearly 35 fibre-mechanised boats at midnight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm