ಬ್ರೇಕಿಂಗ್ ನ್ಯೂಸ್
20-11-23 11:47 am HK News Desk ದೇಶ - ವಿದೇಶ
ಆಂಧ್ರಪ್ರದೇಶ, ನ 20: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ,
ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.


ಈ ನಡುವೆ ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅವಘಡದ ವೇಳೆ ಬೋಟ್ ಗಳಲ್ಲಿ ಮಲಗಿದ್ದವರು ಬೆಂಕಿಗೆ ಆಹುತಿಯಾಗಿರಬಹುದು ಎಂದು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಅಪರಿಚಿತರು ಉದ್ದೇಶಪೂರ್ವಕವಾಗಿ ದೋಣಿಗೆ ಬೆಂಕಿ ಹಚ್ಚಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ಘಟನೆಯಿಂದ ಲಕ್ಷಗಟ್ಟಲೆ ಆಸ್ತಿ ನಷ್ಟವಾಗಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 25 ರಿಂದ 30 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆಯಂತೆ. ಅವಘಡದ ವೇಳೆ ಕೆಲವು ಬೋಟ್ ಗಳು ಆಗ ತಾನೇ ಮೀನುಗಾರಿಕೆ ಮುಗಿಸಿ ಮೀನುಗಾರಿಕಾ ಬಂದರಿಗೆ ಬಂದಿದ್ದವು. ಕೆಲವು ಬೋಟ್ ಗಳು ಇಂಧನ ತುಂಬಿಸಿಕೊಂಡು ಮಿಣಿಗಾರಿಕೆಗೆ ತೆರಳಲು ಸಿದ್ಧತೆ ನಡೆಸಿದ್ದವು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಮತ್ಸ್ಯ ಸಂಪತ್ತೆಲ್ಲ ಸುಟ್ಟು ಬೂದಿಯಾಗಿ ಮಾರ್ಪಟ್ಟಿದೆ.
A massive fire broke out at Andhra Pradesh's Visakhapatnam fishing harbour and gutted around 35 fishing boats on Sunday night. Deputy Commissioner of Police Anand Reddy said the fire first broke out on a boat and then spread to nearly 35 fibre-mechanised boats at midnight.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm