ಬ್ರೇಕಿಂಗ್ ನ್ಯೂಸ್
20-11-23 05:56 pm HK News Desk ದೇಶ - ವಿದೇಶ
ನವದೆಹಲಿ, ನ.20: ಯೆಮೆನ್ ದೇಶದ ಹೌತಿ ಬಂಡುಕೋರರು ಕೆಂಪು ಸಮುದ್ರ ಮೂಲಕ ಭಾರತಕ್ಕೆ ಹೊರಟಿದ್ದ ಕಾರ್ಗೋ ಹಡಗನ್ನು ಅಪಹರಿಸಿದ್ದು, ಅದರಲ್ಲಿದ್ದ 25 ಮಂದಿ ಸಿಬಂದಿಯನ್ನು ಒತ್ತೆಯಾಳು ಮಾಡಿಕೊಂಡಿದ್ದಾರೆ.
ಜಪಾನ್ ಮೂಲದ ಎನ್ ವೈಕೆ ಲೈನ್ ಎಂಬ ಕಂಪನಿ ಹಡಗನ್ನು ಆಪರೇಟ್ ಮಾಡುತ್ತಿದ್ದು, ಹಡಗು ಇಸ್ರೇಲ್ ದೇಶಕ್ಕೆ ಸೇರಿದ್ದು ಎನ್ನಲಾಗುತ್ತಿದೆ. ಹಡಗಿನಲ್ಲಿ ಬಲ್ಗೇರಿಯಾ, ರೊಮಾನಿಯಾ, ಫಿಲಿಪೈನ್ಸ್, ಯುಕ್ರೇನ್ ಮತ್ತು ಮೆಕ್ಸಿಕೋ ಮೂಲದವರಿದ್ದಾರೆ. ಹಡಗು ಅಪಹರಣದ ಬೆನ್ನಲ್ಲೇ ಜಪಾನ್ ದೇಶದ ವಿದೇಶಾಂಗ ಮಂತ್ರಿ, ಇರಾನ್, ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೌತಿ ಬಂಡುಕೋರರು ಹಡಗನ್ನು ಸುರಕ್ಷಿತವಾಗಿ ಬಿಟ್ಟು ಕೊಡುವಂತೆ ಆಗ್ರಹ ಮಾಡಿದ್ದಾರೆ.
ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಮಧ್ಯೆಯೇ ಇಂಥದ್ದೊಂದು ಘಟನೆ ನಡೆದಿರುವುದು ಯುದ್ಧ ಸನ್ನಿವೇಶ ಪೂರ್ವ ಮತ್ತು ದಕ್ಷಿಣ ಏಶ್ಯಾದತ್ತ ಹರಡುವ ಆತಂಕ ಎದುರಾಗಿದೆ. ಹೌತಿ ಬಂಡುಕೋರರು ಶಿಯಾ ಪಂಗಡಕ್ಕೆ ಸೇರಿದ ಮುಸ್ಲಿಮರಾಗಿದ್ದು, ಯೆಮೆನ್ ದೇಶದ ಸುನ್ನಿಗಳ ಆಡಳಿತ ವಿರುದ್ಧ 2014ರಿಂದ ಸಶಸ್ತ್ರ ಸಂಘರ್ಷ ನಡೆಸುತ್ತ ಬಂದಿದೆ. ಹೌತಿ ಬಂಡುಕೋರರು ಅಮೆರಿಕ, ಇಸ್ರೇಲ್ ಮತ್ತು ಸೌದಿ ಅರೇಬಿಯಾ ವಿರುದ್ಧ ಕಟುವಾದ ನಿಲುವು ಹೊಂದಿದೆ. ಇವರಿಗೆ ಇರಾನ್ ಬೆಂಬಲ ನೀಡುತ್ತಿದ್ದು, ಹಮಾಸ್ ಮೇಲಿನ ದಾಳಿ ವಿಚಾರದಲ್ಲಿ ಇಸ್ರೇಲ್ ಮೇಲೆ ದಾಳಿಗೆ ಮುಂದಾಗಿತ್ತು. ಸದ್ಯಕ್ಕೆ ಉತ್ತರ ಯೆಮೆನ್ ಪ್ರಾಂತ್ಯದಲ್ಲಿ ಹೌತಿ ಆಡಳಿತ ಇದೆ.
Yemen's Houthi rebels seized an Israeli-linked cargo ship in a crucial Red Sea shipping route on November 19 and took its 25 crew members hostage, officials said, raising fears that regional tensions heightened over the Israel-Hamas war were playing out on a new maritime front.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm